
ತುಮಕೂರು (ಏ. 29) ಸಿಇಟಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳು ಕಾರು ಅಪಘಾತದಲ್ಲಿ ದಾರುಣ ಸಾವಿಗೀಡಾಗಿದ್ದಾರೆಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವು
ತಿಪಟೂರಿನ ಕೆಬಿ ಕ್ರಾಸ್ ಕುಂದೂರು ಪಾಳ್ಯದ ಬಳಿಯ ಅಪಘಾತ ವಿದ್ಯಾರ್ಥಿಗಳ ಪ್ರಾಣ ಹೊತ್ತೊಯ್ದಿದೆ. ನೇರಳೆ ಮರಕ್ಕೆ ಕಾರು ಗುದ್ದಿದ್ದು ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದದಲ್ಲಿ ಗಾಯಗೊಂಡ ಮೂವರ ಸ್ಥಿತಿ ಗಂಭೀರವಾಗಿದೆ.#
ಅಯ್ಯೋ ವಿಧಿಯೇ..! ಮಗುವಿನ ಜೀವ ಉಳಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು
ವಿದ್ಯಾರ್ಥಿಗಳಾದ ಕಿರಣ್ (18)ಹಾಗೂ ತ್ರಿನೇಶ್ (20) ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ತೆರಳುತ್ತಿದ್ದರು. ಮೃತರು ತುರುವೇಕೆರೆ ತಾಲೂಕು ದಂಡಿನಶಿವರದವರು. ಗಾಯಾಳು ವಿದ್ಯಾರ್ಥಿಗಳನ್ನು ತುರುವೇಕೆರೆ ಹಾಗೂ ದಂಡಿನಶಿವರ ಆಸ್ಪತ್ರೆಗೆ ದಾಖಲಿಸಲಾಗಿದ್ದು ಕೆಬಿ ಕ್ರಾಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.