
ನವದೆಹಲಿ (ಮಾ.24): ಅಚ್ಚರಿ ಎಂಬಂತೆ ಮುಲಯಾಂ ಸಿಂಗ್ ಯಾದವ್, ಅವರ ಕಿರಿಯ ಪುತ್ರ ಪ್ರತೀಕ್ ಸೊಸೆ ಅಪರ್ಣಾ ಇಂದು ಬೆಳಿಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರನ್ನು ಅವರ ಭೇಟಿ ಮಾಡಿದರು.
ಲಕ್ನೋದಲ್ಲಿರುವ ಸಯೋಗಿ ಆದಿತ್ಯ ನಾಥ್ ರವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. ಅಪರ್ಣಾರವರು ಕಾಂಗ್ರೆಸ್ ಕಮ್ ಬಿಜೆಪಿ ಅಭ್ಯರ್ಥಿ ರೀಟಾ ಬಹುಗುಣ ಜೋಷಿ ವಿರುದ್ಧ ಪರಾಭವಗೊಂಡಿದ್ದರು. ರಾಜಕೀಯ ವೈರಿಗಳಾದ ಇವರು ಏನು ಮಾತನಾಡಿರಬಹುದೆನ್ನುವುದು ಸದ್ಯದ ಕುತೂಹಲವಾಗಿದೆ.
ಇಂಟರೆಸ್ಟಿಂಗ್ ವಿಚಾರ ಅಂದರೆ ಪ್ರತೀಕ್ ಹಾಗೂ ಅಪರ್ಣಾ ನರೇಂದ್ರ ಮೋದಿಯವರ ಅಭಿಮಾನಿಗಳಂತೆ! ತಮ್ಮ ನಿವಾಸದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನರೇಂದ್ರ ಮೋದಿ ಜೊತೆ ಇವರು ಸೆಲ್ಫಿ ತೆಗೆದುಕೊಂಡಿರುವುದು ವ್ಯಾಪಕವಾಗಿ ಹರಿದಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.