ಕಣಿವೆಯ ಈ ಶೈತಾನ ಮಟಾಷ್: ಸೈನಿಕರೇ ಭೇಷ್ ಭೇಷ್!

Published : Jan 13, 2019, 11:58 AM IST
ಕಣಿವೆಯ ಈ ಶೈತಾನ ಮಟಾಷ್: ಸೈನಿಕರೇ ಭೇಷ್ ಭೇಷ್!

ಸಾರಾಂಶ

ಐಇಡಿ ಸ್ಫೋಟಕ ನಿಪುಣನ ಎನ್​ಕೌಂಟರ್| ಜೀನತ್​ ಉಲ್​ ಇಸ್ಲಾಂ ಎಂಬ ಉಗ್ರನನ್ನು ಹೊಡೆದುರುಳಿಸಿದ ಸೇನೆ| ಸುಧಾರಿತ ಸ್ಫೋಟಕ ಸಾಧನ ತಯಾರಿಸುವಲ್ಲಿ ನಿಪುಣ| ಎನ್​ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ| ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯ ಕತಾಪುರ ಪ್ರದೇಶದಲ್ಲಿ ಎನ್‌ಕೌಂಟರ್

ಶ್ರೀನಗರ(ಜ.13): ಸುಧಾರಿತ ಸ್ಫೋಟಕ ಸಾಧನ (ಐಇಡಿ) ತಯಾರಿಸುವುದರಲ್ಲಿ ನಿಪುಣನಾಗಿದ್ದ ಉಗ್ರ ಸೇರಿದಂತೆ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯ ಕತಾಪುರ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಜೀನತ್​ ಉಲ್​ ಇಸ್ಲಾಂ ಮತ್ತು ಮತ್ತೋರ್ವ ಉಗ್ರನನ್ನು ಹೊಡೆದುರುಳಲಾಗಿದೆ. 

ಈತ ಈ ಮೊದಲು ಹಿಜ್ಬುಲ್​ ಮುಜಾಹಿದೀನ್​ ಉಗ್ರ ಸಂಘಟನೆಯಲ್ಲಿದ್ದ. ಪ್ರಸ್ತುತ ಆತ ಅಲ್​ ಬದರ್​ ಎಂಬ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದು, ಮೋಸ್ಟ್​ ವಾಂಟೆಡ್​ ಉಗ್ರನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕತಾಪುರ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿಯ ಮೇರೆಗೆ ಶನಿವಾರ ಸಂಜೆ ಶೋಧ ಕಾರ್ಯ ಆರಂಭಿಸಲಾಗಿತ್ತು. ಈ ಸಂದರ್ಭದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಗಿತ್ತು. ಎನ್​ಕೌಂಟರ್​ ನಡೆದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ
ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!