
ಹುಬ್ಬಳ್ಳಿ(ನ.07): ಬೈಕ್ ಸ್ಟಂಟ್ ಮಾಡಲು ಹೋಗಿ ಆಯತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಆನಂದ್ ನಗರದಲ್ಲಿ ನಡೆದಿದೆ.
ಮೃತರನ್ನು ೧೭ ವರ್ಷದ ಇಮ್ರಾನ್ ಮಕಾಂದಾರ್, ಕಲೀಮ್ ಶೇಖ್ ಎಂದು ಗುರುತಿಸಲಾಗಿದೆ. ಆನಂದನಗರದ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಸ್ಟಂಟ್ ಮಾಡಲು ಹೋದಾಗ ಆಯತಪ್ಪಿ ಬೈಕ್ ಕಂಬಕ್ಕೆ ಡಿಕ್ಕಿಹೊಡೆದ ರಭಸಕ್ಕೆ, ಸವಾರರ ತಲೆ ಕಂಬಕ್ಕೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪೋಲೀಸರು ಭೇಟಿ ನೀಡಿ, ಮೃತದೇಹಗಳನ್ನ ಹುಬ್ಬಳ್ಳಿಯ ಕಿಮ್ಸ್ ಶವಗಾರಕ್ಕೆ ಸಾಗಿಸಿದ್ದು, ಮೃತರ ಕುಟುಂಬದವರ ಅಕ್ರಂದನ ಮುಗಿಲುಮುಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.