
ರೋಣ(ಏ.12): ಕೇಸಿಂಗ್ ಪೈಪ್ ತೆಗೆಯುವ ವೇಳೆ ಕೊಳೆ ಬಾವಿಯೊಳಗೆ ಇಬ್ಬರು ವ್ಯಕ್ತಿಗಳು ಬಿದ್ದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನಲ್ಲಿ ನಡೆದಿದೆ. ಸವಡಿ ಗ್ರಾಮದ ಜಮೀನೊಂದರಲ್ಲಿ ಬತ್ತಿದ ಕೊಳವೆ ಬಾವಿಯಿಂದ ಕೇಸಿಂಗ್ ಪೈಪ್ ತೆಗೆಯುತ್ತಿದ್ದರು. ಈ ವೇಳೆ ಮಣ್ಣು ಕುಸಿದು ಕೊಳವೆ ಬಾವಿಗೆ ಇಬ್ಬರು ವ್ಯಕ್ತಿಗಳು ಬಿದ್ದಿದ್ದಾರೆ. ಕೊಳವೆ ಬಾವಿಗೆ ಬಿದ್ದವರನ್ನ ಬಸವರಾಜ್ ಮತ್ತು ಶಂಕ್ರಪ್ಪ ಎಂದು ಗುರುತಿಸಲಾಗಿದೆ.
ಶಂಕ್ರಪ್ಪ ಬಾಣದ ಎಂಬುವರ ಜಮೀನಿನಲ್ಲಿ ಈ ದುರಂತ ಸಂಭವಿಸಿದೆ. ಸುಮಾರು 30 ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಸಿಲುಕಿರುವ ಶಂಕೆಯಿದೆ. ಇಬ್ಬರು ಕಾರ್ಮಿಕರ ರಕ್ಷಣೆಗಾಗಿ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ರೋಣ ಪೊಲೀಸರ ದೌಡಾಯಿಸಿದ್ದು,ಸ್ಥಳಕ್ಕೆ ನೂರಾರು ಜನರು ಜಮಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.