
ಮಂಗಳೂರು(ಮಾ.11): ಸಚಿವ ರಮಾನಾಥ್ ರೈ ಹಾಗೂ ಯು.ಟಿ. ಖಾದರ್ 'ಭಯೋತ್ಫಾದಕರು' ಹೇಳಿಕೆಗೆ ಸಚಿವ ಯು.ಟಿ. ಖಾದರ್ ಖಡಕ್ ತಿರುಗೇಟು ನೀಡಿದ್ದಾರೆ.
ಕೆಲ ಸೀಸನ್'ಗಳಲ್ಲಿ ಕೆಲ ರೋಗಗಳು ಬರುತ್ತವೆ. ಅದೇ ರೀತಿ ಚುನಾವಣಾ ಸೀಸನ್'ನಲ್ಲಿ ಇಂತಹ ರೋಗಗಳು ಬರುತ್ತವೆ. ಆದ್ದರಿಂದ ಇಂತಹ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಖಾದರ್ ಹೇಳಿದ್ದಾರೆ. ಈ ಮೊದಲು ಬಿಜೆಪಿ ಕಾರ್ಯದರ್ಶಿ ರವಿ ಕುಮಾರ್ ಸಚಿವ ರೈ ಹಾಗೂ ಖಾದರ್ ಭಯೋತ್ಫಾದಕರು ಎಂದು ಹೇಳಿಕೆ ನೀಡಿದ್ದರು.
ಬಿಜೆಪಿಗರಿಗೆ ದೇಶದ ಬಗ್ಗೆ ಕಾಳಜಿ ಇದ್ರೆ ಪ್ರತ್ಯೇಕತಾವಾದಿಗಳಿಗೆ ನೀಡುತ್ತಿರುವ ಬೆಂಬಲವನ್ನು ನಿಲ್ಲಿಸಲಿ. ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳ ಜೊತೆ ಕೈಜೋಡಿಸಿ ನಮಗೆ ಬುದ್ದಿಹೇಳಲು ಬರುತ್ತಾರೆ. ಜನರನ್ನು ದಾರಿ ತಪ್ಪಿಸುವ, ಮತೀಯ ಭಾವನೆಗಳನ್ನು ಬಿತ್ತುವ ಕೆಲಸ ಮಾಡಬೇಡಿ ಎಂದು ಕಳಕಳಿ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.