ಅಯೋಧ್ಯೆಯಲ್ಲಿ ಉದ್ಧವ್ ಮತ್ತು ತಂಡ: ಮಂದಿರಕ್ಕಾಗಿ ಸುಗ್ರೀವಾಜ್ಞೆಗೆ ಒತ್ತಾಯ!

Published : Jun 16, 2019, 04:06 PM IST
ಅಯೋಧ್ಯೆಯಲ್ಲಿ ಉದ್ಧವ್ ಮತ್ತು ತಂಡ: ಮಂದಿರಕ್ಕಾಗಿ ಸುಗ್ರೀವಾಜ್ಞೆಗೆ ಒತ್ತಾಯ!

ಸಾರಾಂಶ

ಅಯೋಧ್ಯೆಯಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ| ನೂತನ ಸಂಸದರೊಂದಿಗೆ ರಾಮಲಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ| ತಂದೆ ಉದ್ಧವ್ ಠಾಕ್ರೆಗೆ ಪುತ್ರ ಆದಿತ್ಯ ಠಾಕ್ರೆ ಸಾಥ್| ರಾಮ ಮಂದಿರ ನಿರ್ಮಾಣಕ್ಕೆ ಇದು ಸಕಾಲ ಎಂದ ಶಿವಸೇನಾ ಮುಖ್ಯಸ್ಥ| ಸುಗ್ರೀವಾಜ್ಞೆ ಜಾರಿಯ ಮೂಲಕ ಮಂದಿರ ನಿರ್ಮಾಣಕ್ಕೆ ಆಗ್ರಹ| 

ಅಯೋಧ್ಯೆ(ಜೂ.16): ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ತಮ್ಮ 18 ನೂತನ ಸಂಸದರೊಂದಿಗೆ ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ, ಇಂದು ಅಯೋಧ್ಯೆಯಲ್ಲಿನ ರಾಮಲಲ್ಲಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪುತ್ರ ಅದಿತ್ಯ ಜೊತೆಗೆ ಉದ್ಧವ್ ಠಾಕ್ರೆ ಅಯೋಧ್ಯೆಗೆ ಬಂದಿಳಿದ ಉದ್ಧವ್, ಸಂಸದರೊಂದಿಗೆ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇದು ಸಕಾಲ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಉದ್ಧವ್ ಆಭಿಪ್ರಾಯಪಟ್ಟರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ