ದಕ್ಷ ಅಧಿಕಾರಿ ಮೇಜಿನ ಮೇಲೆ ಮೊಬೈಲ್ ಇಟ್ಟು ಹೊರನಡೆದಿದ್ದು ಯಾಕೆ?

Published : Jul 06, 2018, 07:50 PM IST
ದಕ್ಷ ಅಧಿಕಾರಿ ಮೇಜಿನ ಮೇಲೆ ಮೊಬೈಲ್ ಇಟ್ಟು ಹೊರನಡೆದಿದ್ದು ಯಾಕೆ?

ಸಾರಾಂಶ

ಕೆಲ ದಿನಗಳಿಂದ ಮರೆಯಾಗಿದ್ದ ಪೊಲೀಸ್ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ಕಿರುಕುಳ ವಿಚಾರ ಮತ್ತೆ ಸುದ್ದಿ ಮಾಡುತ್ತಿದೆ. ಈ ಬಾರಿ ಸುದ್ದಿ ಉಡುಪಿಯಿಂದ ಬಂದಿದೆ.

ಉಡುಪಿ[ಜು.6] ಜಿಲ್ಲೆಯ ಹೆಬ್ರಿ  ಎಸ್ ಐಗೆ ಹಿರಿಯ ಅಧಿಕಾರಿಗಳಿಂದ ಕಿರುಕುಳ  ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೇ ಮನನೊಂದಿರುವ ಎಸ್ ಐ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಸಿವಿಲ್ ವ್ಯಾಜ್ಯವೊಂದಕ್ಕೆ ಸಂಬಂಧಿಸಿ ಎಸ್ ಐ ಮಹಾಬಲ ಶೆಟ್ಟಿ ಅವರನ್ನು ಹಿರಿಯ ಅಧಿಕಾರಿಗಳು ತರಾಟೆಗೆ ತೆಗೆದು ಕೊಂಡಿದ್ದರು. ಸರಕಾರ ನೀಡಿದ ಮೊಬೖಲ್ ನ್ನು ಮೇಜಿನ ಮೇಲಿಟ್ಟು ಶೆಟ್ಟಿ ಅವರು ಹೊರನಡೆದಿದ್ದಾರೆ.

ಹಿರಿಯ ಅಧಿಕಾರಿಗಳು ಮನವೊಲಿಕೆಗೆ ಯತ್ನ ಮಾಡಿದ್ದಾರೆ. ಎಸ್ ಐ ಮಹಾಬಲ ಶೆಟ್ಟಿಯವರು ರಾಜೀನಾಮೆ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಲು ಪೊಲೀಸ್ ಇಲಾಖೆ ಅಧಿಕಾರಿಗಳು ನಿರಾಕರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೋಕಾಯುಕ್ತ ದಾಳಿ: ₹50 ಸಾವಿರ ಹಣ ಟಾಯ್ಲಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಕೃಷಿ ಅಧಿಕಾರಿ!
ಒಜಿ ನಿರ್ದೇಶಕನಿಗೆ 3 ಕೋಟಿ ರೂ ಕಾರು ಗಿಫ್ಟ್ ಕೊಟ್ಟ ಪವನ್ ಕಲ್ಯಾಣ್, ಭಾವುಕರಾದ್ ಸುಜೀತ್