
ಮಂಗಳೂರು[ಏ.16]: ಉಡುಪಿ ಹಾಗೂ ದ.ಕ. ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.
ಕೆಲವು ಸಮಯದ ಹಿಂದೆ ಸಿಎಂ ಕುಮಾರಸ್ವಾಮಿ ಅವರು, ಕರಾವಳಿ ಜನರ ಜನತೆಯ ಬಗ್ಗೆ ಹಗುರವಾಗಿ ಮಾತನಾಡಿದ್ದು ವ್ಯಾಪಕ ಟೀಕೆ, ವಿರೋಧಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅದಕ್ಕೆ ಪ್ರತಿಕ್ರಿಯೆಯಾಗಿ ನಳಿನ್ ಕುಮಾರ್ ಕಟೀಲ್ ಈ ಟ್ವೀಟ್ ಮಾಡಿ ಸಿಎಂ ಅವರ ಕಾಲೆಳೆದಿದ್ದಾರೆ.
‘ಮುಖ್ಯಮಂತ್ರಿಯವರೇ..., ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಉಡುಪಿ ಪ್ರಥಮ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. ಇದನ್ನು ನೋಡಿಯೂ ಈ ಜಿಲ್ಲೆಯ ಜನತೆ ತಿಳಿವಳಿಕೆ ಇಲ್ಲದವರು ಅಂತೀರಾ...? ಇದು ಕ್ಷಮೆ ಕೇಳುವ ಸಮಯ...’ ಎಂದು ನಳಿನ್ ಕುಮಾರ್ ಟ್ವೀಟ್ ಮಾಡಿರುವುದು ಇದೀಗ ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.