ಬೆಂಗಳೂರು ವಿವಿಯಲ್ಲಿ ಪರೀಕ್ಷಾ ಅಕ್ರಮ..? ಎದುರಾಗಿದೆ ಗಂಭೀರ ಆರೋಪ..!

Published : Mar 06, 2018, 09:17 AM ISTUpdated : Apr 11, 2018, 12:40 PM IST
ಬೆಂಗಳೂರು ವಿವಿಯಲ್ಲಿ ಪರೀಕ್ಷಾ ಅಕ್ರಮ..? ಎದುರಾಗಿದೆ ಗಂಭೀರ ಆರೋಪ..!

ಸಾರಾಂಶ

ಕಳೆದ ಎರಡು ವರ್ಷಗಳಿಂದ ಬೆಂಗಳೂರು ದೂರ ಶಿಕ್ಷಣ ಕೋರ್ಸ್ ಗಳಿಗೆ ಯುಜಿಸಿ ಬ್ರೇಕ್ ನೀಡಿತ್ತು. ಆದರೆ ಇದೀಗ ಮತ್ತೆ ಯುಜಿಸಿ ಬೆಂಗಳೂರು ದೂರ ಶಿಕ್ಷಣ ಕೋರ್ಸ್ ಗಳನ್ನ ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ.

ಬೆಂಗಳೂರು :  ಕಳೆದ ಎರಡು ವರ್ಷಗಳಿಂದ ಬೆಂಗಳೂರು ದೂರ ಶಿಕ್ಷಣ ಕೋರ್ಸ್ ಗಳಿಗೆ ಯುಜಿಸಿ ಬ್ರೇಕ್ ನೀಡಿತ್ತು. ಆದರೆ ಇದೀಗ ಮತ್ತೆ ಯುಜಿಸಿ ಬೆಂಗಳೂರು ದೂರ ಶಿಕ್ಷಣ ಕೋರ್ಸ್ ಗಳನ್ನ ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ.

ಇದರ ಮಧ್ಯೆ ಬೆಂಗಳೂರು ದೂರ ಶಿಕ್ಷಣ ಪರೀಕ್ಷೆಯ ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಅಂತ ದೂರಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಡಾ.ಬಿ.ಸಿ.ಮೈಲಾರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಪರೀಕ್ಷಾ ವಿಭಾಗದ ರಿಜಿಸ್ಟ್ರಾರ್ ಪ್ರೊ.ಶಿವರಾಜ್,ಸಿಂಡಿಕೇಟ್ ಸದಸ್ಯ ಶಿವಣ್ಣ ಹಾಗೂ ಖಾಸಗಿ ಕಾಲೇಜಿನ ಡೇವಿಡ್ ರಾಜು ಮೇಲೆ ಪ್ರೊ.ಮೈಲಾರಪ್ಪ ಪರೀಕ್ಷಾ ಅಕ್ರಮದ ಗಂಭೀರ ಆರೋಪ ಮಾಡಿದ್ದಾರೆ.

ಪರೀಕ್ಷೆ ನಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪೋನ್ ನಂಬರ್ ಸಂಗ್ರಹಿಸಿ ಒಂದು ವಿಷಯಕ್ಕೆ ಇಂತಿಷ್ಟು ಹಣ ಫಿಕ್ಸ್ ಮಾಡಿಕೊಂಡು ಲಕ್ಷಾಂತರ ರೂಪಾಯಿ ಹಣ ಮಾಡಿದ್ದಾರೆ. ಈ ಬಗ್ಗೆ ವಿವಿ ಹಂಗಾಮಿ ಕುಲಪತಿಗಳಿಗೆ ಸಮಗ್ರವಾಗಿ ಪತ್ರ ಬರೆದಿದ್ದು, ಅಕ್ರಮದಲ್ಲಿ ನನ್ನ ಪಾತ್ರ ಇಲ್ಲ ಎಂದು ಪ್ರೊ.ಡಾ.ಬಿ.ಸಿ ಮೈಲಾರಪ್ಪ ಸ್ಪಷ್ಟಪಡಿಸಿದ್ದಾರೆ.

ಇನ್ನು ದೂರ ಶಿಕ್ಷಣದ ಪರೀಕ್ಷೆಗಳ ಮೌಲ್ಯಮಾಪನ ನಡೆಸಲು ಪ್ರಾಂಶುಪಾಲ ಹರೀಶ್ ಕಸ್ಟೋಡಿಯನ್ ನೇಮಕ ಮಾಡುವ ಸಂಬಂಧ ಸಿಂಡಿಕೇಟ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಸಿಂಡಿಕೇಟ್ ಸದಸ್ಯರ ಮಾತನ್ನ ಪರಿಗಣಿಸದೇ ರಿಜಿಸ್ಟ್ರಾರ್ ಪ್ರೊ,ಶಿವರಾಜ್ ,ಹರೀಶ್ ಅವರನ್ನೇ ನೇಮಕ ಮಾಡುವಂತೆ ಕುಲಪತಿಗಳಿಂದ ಒತ್ತಾಯ ಪೂರ್ವಕವಾಗಿ ಸಹಿ ಮಾಡಿಸಿಕೊಂಡಿದ್ದಾರೆ ಅನ್ನೋ ಆರೋಪ ಕೂಡ ಕೇಳಿ ಬಂದಿದೆ.

ಆದರೆ ಈ ಬಗ್ಗೆ ಬೆಂಗಳೂರು ವಿವಿಯ ಹಂಗಾಮಿ ಕುಲಪತಿ ಪ್ರೊ.ವಿ.ಸುದೇಶ್ ಮಾತನಾಡಿ ನಾನು ಯಾರ ಒತ್ತಾಯಕ್ಕೂ ಮಣಿದು ಕಸ್ಟೋಡಿಯನ್ ನೇಮಕ ಮಾಡಿಲ್ಲ. ಮೂರು ನಾಲ್ಕು ಹೆಸರುಗಳನ್ನ ಕೊಟ್ಟಿದ್ದರು. ಅದರಲ್ಲಿ ಒಂದಕ್ಕೆ ಸಹಿ ಮಾಡಿದ್ದೇನೆ ಎಂದು ಅವರು ಸ್ಪಷ್ಟನೇ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪರೀಕ್ಷಾ ಅಕ್ರಮಗಳಿಗೆ ವೇದಿಕೆ ಮಾಡಿಕೊಡುತ್ತಿದೆಯಾ  ಅನ್ನೋ ಅನುಮಾನ ವ್ಯಕ್ತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!