ಆಧಾರ್‌ ಬಹಿರಂಗದ ಒಳಿತು- ಕೆಡುಕಿನ ಬಗ್ಗೆ ಮಾಹಿತಿ

Published : Aug 13, 2018, 10:31 AM ISTUpdated : Sep 09, 2018, 09:24 PM IST
ಆಧಾರ್‌ ಬಹಿರಂಗದ  ಒಳಿತು- ಕೆಡುಕಿನ ಬಗ್ಗೆ ಮಾಹಿತಿ

ಸಾರಾಂಶ

ಆಧಾರ್‌ ನಂಬರ್‌ ಹಂಚಿಕೊಳ್ಳುವುದರಿಂದ ಆಗುವ ಒಳಿತು, ಕೆಡುಕಿನ ಬಗ್ಗೆ ಜಾಗೃತಿ ಮೂಡಿಸಲು ಆಧಾರ್‌ ಪ್ರಾಧಿಕಾರ- ಯುಐಡಿಎಐ ಚಿಂತನೆ ನಡೆಸಿದೆ.

ನವದೆಹಲಿ: ಟ್ರಾಯ್‌ ಮುಖ್ಯಸ್ಥ ಆರ್‌.ಎಸ್‌. ಶರ್ಮಾ ತಮ್ಮ ಆಧಾರ್‌ ನಂಬರ್‌ ಅನ್ನು ಸಮಾಜಿಕ ಜಾಲತಾಣಗಳಲ್ಲಿ ಹಾಕಿ ಹ್ಯಾಕ್‌ ಮಾಡುವಂತೆ ಸವಾಲು ಹಾಕಿದ ಬೆನ್ನಲ್ಲೇ, ಆಧಾರ್‌ ನಂಬರ್‌ ಹಂಚಿಕೊಳ್ಳುವುದರಿಂದ ಆಗುವ ಒಳಿತು, ಕೆಡುಕಿನ ಬಗ್ಗೆ ಜಾಗೃತಿ ಮೂಡಿಸಲು ಆಧಾರ್‌ ಪ್ರಾಧಿಕಾರ- ಯುಐಡಿಎಐ ಚಿಂತನೆ ನಡೆಸಿದೆ.

ಆಧಾರ್‌ ನಂಬರ್‌ ಅನ್ನು ಫೇಸ್‌ಬುಕ್‌, ಟ್ವೀಟರ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಪಾನ್‌ ನಂಬರ್‌, ಬ್ಯಾಂಕ್‌ ಅಕೌಂಟ್‌ ಬಂಬರ್‌, ಕ್ರೆಡಿಟ್‌ ಕಾರ್ಡ್‌ ನಂಬರ್‌ ನಂತಹ ವೈಯಕ್ತಿಕ ಮಾಹಿತಿಗಳನ್ನು ನೀಡಿದ್ದಕ್ಕೆ ಸಮ ಎಂಬ ಎಚ್ಚರಿಕೆ ನೀಡಲು ಯುಐಡಿಎಐ ಉದ್ದೇಶಿಸಿದೆ.

ಯಾವುದೇ ಅಂಜಿಕೆ ಇಲ್ಲದೇ ಆಧಾರ್‌ ನಂಬರ್‌ ಅನ್ನು ಬಳಸಬುದಾಗಿದೆ ಎಂಬುದನ್ನು ಜನರಿಗೆ ತಿಳಿಸುವ ಅಗತ್ಯವಿದೆ. ಈ ಸಂಬಂಧ ಪ್ರಶ್ನೋತ್ತರ ಮಾಲಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಯುಐಡಿಎಐ ಸಿಇಒ ಅಜಯ್‌ ಭೂಷಣ್‌ ಪಾಂಡೆ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಸಿದ್ದರಾಮಯ್ಯ ಆಡಳಿತ ಕೇವಲ ಟೀಕೆಯಲ್ಲಿ ಮುಳುಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ