
ನವದೆಹಲಿ(ಆ.04): ಜಮ್ಮು ಕಾಶ್ಮೀರದಲ್ಲಿ ಹೆಚ್ಚುವರಿ ಸೇನೆ ನಿಯೋಜನೆ ಹಾಗೂ ಅಮರನಾಥ್ ಯಾತ್ರಾರ್ಥಿಗಳಿಗೆ ಕಣಿವೆ ತೊರೆಯುವಂತೆ ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಕಾಶ್ಮೀರ ಪ್ರವಾಸ ಕೈಗೊಳ್ಳದಂತೆ ಇಂಗ್ಲೆಂಡ್, ಆಸ್ಟ್ರೆಲೀಯಾ ಹಾಗೂ ಜರ್ಮಿನಿ ಸರ್ಕಾರಗಳು ತಮ್ಮ ನಾಗರಿಕರಿಗೆ ಸೂಚನೆ ನೀಡಿವೆ.
ಕಾಶ್ಮೀರದಲ್ಲಿ ತೀವ್ರತರವಾದ ಬೆಳವಣಿಗೆಗಳು ಕಂಡು ಬರುತ್ತಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿರುವುದಾಗಿ ಇಂಗ್ಲೆಂಡ್, ಆಸ್ಟ್ರೆಲೀಯಾ ಹಾಗೂ ಜರ್ಮಿನಿ ಸರ್ಕಾರಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕಾಶ್ಮೀರ ಪ್ರವಾಸವನ್ನು ರದ್ದಗೊಳಿಸುವಂತೆ ಹಾಗೂ ಈಗಾಗಲೇ ರಾಜ್ಯದಲ್ಲಿರುವ ತನ್ನ ನಾಗರಿಕರು ಸ್ಥಳೀಯ ಆಡಳಿತ ನೀಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಸಿಸುವಂತೆ ಈ ಮೂರು ದೇಶಗಳು ಮನವಿ ಮಾಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.