ಮಂದಿರ ನಿರ್ಮಾಣಕ್ಕಾಗಿ ಜಾಗ ದಾನ ಮಾಡಿ: ಮಾಲಿಕರಿಗೆ ಉಮಾ ಭಾರತಿ ಮನವಿ

Published : Mar 21, 2017, 03:09 PM ISTUpdated : Apr 11, 2018, 01:09 PM IST
ಮಂದಿರ ನಿರ್ಮಾಣಕ್ಕಾಗಿ ಜಾಗ ದಾನ ಮಾಡಿ: ಮಾಲಿಕರಿಗೆ ಉಮಾ ಭಾರತಿ ಮನವಿ

ಸಾರಾಂಶ

ಆ ಜಾಗದ ಮಾಲಿಕರ ಹೆಸರು ಗೌಪ್ಯವಾಗಿಡಲಾಗಿದೆ. ಆ ಜಾಗವನ್ನು ಮಂದಿರ ನಿರ್ಮಾಣಕ್ಕಾಗಿ ದಾನಮಾಡಿ, ದೇವರ ಮೆಚ್ಚುಗೆಗೆ ಪಾತ್ರವಾಗಬೇಕೆಂದು ನಾನು ಅದರ ಮಾಲಿಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಉಮಾ ಭಾರತಿ ಏಎನ್ಐಗೆ ಹೇಳಿದ್ದಾರೆ.

ನವದೆಹಲಿ (ಮಾ.21): ನ್ಯಾಯಲಯದ ಹೊರಗೆ ಬಾಬ್ರಿ ಮಸೀದಿ- ರಾಮ ಮಂದಿರ ವಿವಾದವನ್ನು ಬಗೆಹರಿಸಿಕೊಳ್ಳಲು ಸುಪ್ರೀಂ ಕೋರ್ಟ್ ಸಲಹೆ ನೀಡಿರುವ ಹಿನ್ನಲೆಯಲ್ಲಿ ಕೇಂದ್ರ ಸಚಿವೆ ಉಮಾ ಭಾರತಿ, ರಾಮಮಂದಿರ ನಿರ್ಮಾಣಕ್ಕಾಗಿ ಜಾಗವನ್ನು ದಾನಮಾಡುವಂತೆ ಅದರ ಮಾಲಿಕರಿಗೆ ವಿನಂತಿ ಮಾಡಿಕೊಂಡಿದ್ದಾರೆ.

ಈ ವಿಷಯವು ಸೂಕ್ಷ್ಮ ಹಾಗೂ ಭಾವನಾತ್ಮಕವಾಗಿದೆ ಎಂದಿರುವ ಉಮಾ ಭಾರತಿ, ಸುಪ್ರೀಂ ಕೋರ್ಟ್ ಸಲಹೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಆ ಜಾಗದ ಮಾಲಿಕರ ಹೆಸರು ಗೌಪ್ಯವಾಗಿಡಲಾಗಿದೆ. ಆ ಜಾಗವನ್ನು ಮಂದಿರ ನಿರ್ಮಾಣಕ್ಕಾಗಿ ದಾನಮಾಡಿ, ದೇವರ ಮೆಚ್ಚುಗೆಗೆ ಪಾತ್ರವಾಗಬೇಕೆಂದು ನಾನು ಅದರ ಮಾಲಿಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಉಮಾ ಭಾರತಿ ಏಎನ್ಐಗೆ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಸಲಹೆಯನ್ನು ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಾ ಸ್ವಾಗತಿಸಿದ್ದಾರೆ. ಎರಡು ಕಡೆಯವರು ಲುಳಿತು ಮಾತುಕತೆ ನಡೆಸಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳಬೇಕೆಂದು ಅವರು ಹೇಳಿದ್ದಾರೆ.

80-90ರ ದಶಕದಲ್ಲಿ ರಾಮ ಜನ್ಮಭೂಮಿ ಚಳುವಳಿಯಲ್ಲಿ ಉಮಾ ಭಾರತಿ ಸಕ್ರಿಯವಾಗಿ ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Swiggy Report 2025: ಸೆಕೆಂಡಿಗೆ 3ರಂತೆ, 93 ಮಿಲಿಯನ್ ಬಿರಿಯಾನಿ ಆರ್ಡರ್‌ ಬಂದಿವೆ! ಬೆಚ್ಚಿಬೀಳಿಸುತ್ತೆ ವರದಿ!
ಪ್ರಿಯಾಂಕಾ ಗಾಂಧಿ ಪ್ರತಿದಿನ 'ನೀಲಿ ಅರಿಶಿನ' ಸೇವಿಸುತ್ತಾರೆ, ಇಲ್ಲಿದೆ ಇದರ ಅದ್ಭುತ ಪ್ರಯೋಜನಗಳ ಲಿಸ್ಟ್!