
ನವದೆಹಲಿ(ಡಿ.04): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ಸಚಿವೆ ಉಮಾ ಭಾರತಿ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿರುವ ಉಮಾ ಭಾರತಿ ಅಯೋಧ್ಯೆ ರಾಮಮಂದಿರ ಹಾಗೂ ಗಾಂಗಾ ಶುದ್ದೀಕರಣ ಯೋಜನೆಯಲ್ಲಿ ತಾವು ತೊಡಗಿಕೊಳ್ಳಲು ಬಯಸಿರುವುದಾಗಿ ಉಮಾ ಭಾರತಿ ತಿಳಿಸಿದ್ದಾರೆ.
ತಾವು ಈಗಾಗಲೇ ಬಿಜೆಪಿಯಿಂದ ಅನುಮತಿ ಪಡೆದುಕೊಂಡಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಹಾಗೂ ಗಂಗಾ ಶುದ್ದೀಕರಣದ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗುವುದಾಗಿ ಉಮಾ ಭಾರತಿ ಸ್ಪಷ್ಟಪಡಿಸಿದ್ದಾರೆ.
ಉಮಾ ಭಾರತಿ ಅವರ ಈ ನಿರ್ಧಾರದಿಂದ ಕಮಲ ಪಾಳಯದ ಇಬ್ಬರು ಪ್ರಭಾವಿ ಮಹಿಳಾ ನಾಯಕಿಯರು ಚುನಾವಣಾ ಕಣದಿಂದ ಹಿಂದೆ ಸರಿದಂತಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಈ ಹಿಂದೆಯೇ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಘೋಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.