
ನವದೆಹಲಿ[ಜು.24] ಉಗ್ರ ಅಫ್ಜಲ್ ಗುರುನನ್ನು ನೇಣಿಗೇರಿಸಿದ್ದನ್ನು ಖಂಡಿಸಿ 2016, ಫೆಬ್ರವರಿ 9ರಂದು ಕನ್ನಯ್ಯ ಕುಮಾರ್ ಮತ್ತು ಉಮರ್ ಖಾಲೀದ್ ಸೇರಿದಂತೆ ಅನೇಕ ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆ ಕೂಗಿದ್ದದರು. ಇದಕ್ಕೆ ಸಂಬಂಧಿಸಿ ಸಾಕ್ಷ್ಯಗಳು ಲಭ್ಯವಾದ ನಂತರ ಉಮರ್ ಖಲೀದ್ ಗೆ ಕಾಲೇಜಿನಿಂದ ಬಹಿಷ್ಕಾರ ಹಾಕಲಾಗಿತ್ತು.
ಇದೀಗ ಉಮರ್ ಖಾಲೀದ್ ಮುಂದಿಟ್ಟಿದ್ದ ಪಿಎಚ್ಡಿ ವರದಿಯನ್ನು ಕಾಲೇಜು ಸ್ವೀಕರಿಸಲು ನಿರಾಕರಿಸಿದೆ. ದೆಹಲಿ ಹೈಕೋರ್ಟ್ ಆದೇಶದ ಪರಿಪಾಲನೆ ಮಾಡಲಾಗಿದೆ ಎಂದು ಕಾಲೇಜು ಹೇಳಿದೆ. ಸೋಮವಾರ ಅಂದರೆ ಜು.23 ವರದಿ ಸಲ್ಲಿಕೆಗೆ ಅಂತಿಮ ದಿನವಾಗಿತ್ತು. ಆದರೆ ಪ್ರಕರಣದಲ್ಲಿ ಇದ್ದ ಕನ್ನಯ್ಯ ಕುಮಾರ್ ಪಿಎಚ್ ಡಿ ವರದಿಯನ್ನು ಕಾಲೇಜು ಸ್ವೀಕಾರ ಮಾಡಿದೆ.
ಕನ್ನಯ್ಯ ಕುಮಾರ್, ಉಮರ್ ಖಾಲೀದ್ ಗೆ ಶಿಕ್ಷೆ ಫಿಕ್ಸ್
ಆಡಳಿತ ಮಂಡಳಿ ವಿರುದ್ಧ ಮತ್ತೆ ಆರೋಪ ಮಾಡಿರುವ ಉಮರ್ ಖಾಲೀದ್, ನಾಣು ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲು ಏರುತ್ತೇನೆ ಎಂದಿದ್ದಾರೆ. ಒಟ್ಟಿನಲ್ಲಿ ಕಾಲೇಜು ಆಡಳಿತ ಮಂಡಳಿ ನಾವು ನ್ಯಾಯಾಲಯದ ತೀರ್ಮಾನ ಎತ್ತಿ ಹಿಡಿದಿದ್ದೇವೆ ಎಂದು ಸಮರ್ಥನೆ ಮಾಡಿಕೊಂಡಿದ್ದರೆ ನಾನು ಇನ್ನೊಂದು ಸುತ್ತಿನ ಕಾನೂನು ಹೋರಾಟ ಮಾಡುತ್ತೇನೆ ಎಂಬುದು ಉಮರ್ ಖಾಲಿದ್ ಹೇಳಿಕೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.