ಪ್ರತಿಭಟನೆ ವೇಳೆ ಸಚಿವೆ ಉಮಾಶ್ರೀ ಅಸ್ವಸ್ಥ

Published : Feb 27, 2017, 11:41 AM ISTUpdated : Apr 11, 2018, 12:43 PM IST
ಪ್ರತಿಭಟನೆ ವೇಳೆ ಸಚಿವೆ ಉಮಾಶ್ರೀ ಅಸ್ವಸ್ಥ

ಸಾರಾಂಶ

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಇಂದು ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಚಿವೆ ನಂತರ ಉಮಾಶ್ರೀ ವೇದಿಕೆಯಲ್ಲಿ ಆಸೀನರಾಗಿದ್ದರು.

ಬಾಗಲಕೋಟೆ(ಫೆ.27): ನೋಟ್ ಬ್ಯಾನ್ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವೆ ಉಮಾಶ್ರೀ ದಿಢೀರನೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ.

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಇಂದು ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಚಿವೆ ನಂತರ ಉಮಾಶ್ರೀ ವೇದಿಕೆಯಲ್ಲಿ ಆಸೀನರಾಗಿದ್ದರು. ಈ ವೇಳೆ ಸಚಿವೆ ತಕ್ಷಣ ಅಸ್ವಸ್ಥ ರಾದರು. ತಕ್ಷಣ ಸ್ಥಳೀಯ ತಾಲೂಕು ಆಸ್ಪತ್ರೆ ವೈದ್ಯೆ ಕುಸುಮಾ ಸ್ಥಳಕ್ಕೆ ಧಾವಿಸಿ ಆರೋಗ್ಯ ವಿಚಾರಿಸಿದರು.ಬಳಿಕ ವೈದ್ಯರು ವಿಶ್ರಾಂತಿ ಅಗತ್ಯತೆ ಹೇಳಿದ ಪರಿಣಾಮ ವಾಹನದ ಮೂಲಕ ತಾಲೂಕ ಆಸ್ಪತ್ರೆಗೆ ಉಮಾಶ್ರೀ ಅವರು ದಾಖಲಾಗಿ ಚಿಕಿತ್ಸೆ ಪಡೆದರು.ಈಗ ಗುಣಮುಖರಾಗಿದ್ದು, ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ದೃಢಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ ದೆವ್ವದ ಮನೆ, ದಿನಕ್ಕೊಂದು ಬಿಳಿ-ಕರಿ ದೆವ್ವ ಹೊರ ಬರ್ತಿವೆ: ಆರ್.ಅಶೋಕ್ ವ್ಯಂಗ್ಯ
ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ