ರಾಜೀನಾಮೆ ಗುಟ್ಟು ರಟ್ಟು ಮಾಡಿದ ಉಮೇಶ್ ಜಾಧವ್

Published : Mar 06, 2019, 11:49 PM IST
ರಾಜೀನಾಮೆ ಗುಟ್ಟು ರಟ್ಟು ಮಾಡಿದ ಉಮೇಶ್ ಜಾಧವ್

ಸಾರಾಂಶ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೆಕ್ಕೆಗೆ ಸೇರಿರುವ ಉಮೇಶ್ ಜಾಧವ್ ರಾಜೀನಾಮೆ ಕಾರಣ ಬಿಚ್ಚಿಟ್ಟಿದ್ದಾರೆ. 

ಕಲಬುರಗಿ[ಮಾ. 06] ನನ್ನ ರಾಜೀನಾಮೆ ಅಂಗೀಕಾರವಾಗುತ್ತದೆ. ಸ್ಪೀಕರ್ ರಮೇಶ್ ಕುಮಾರ್ ಮೇಲೆ ನನಗೆ  ನಂಬಿಕೆ ಇದೆ.  ಈ ಬಗ್ಗೆ ಜನರಿಗೆ ಆತಂಕ ಇರಬಹುದು ನನಗೆ ಯಾವುದೇ ಆತಂಕ ಇಲ್ಲ  ಎಂದು ಉಮೇಶ್ ಜಾಧವ್ ಹೇಳಿದ್ದಾರೆ.

ಸ್ಪೀಕರ್ ತಮ್ಮ ಮನೆಯಲ್ಲಿ 45 ನಿಮಿಷ ಟೈಮ್ ಕೊಟ್ಟಿದ್ದರು . ಆದರೆ ಕೈ ನಾಯಕರು 5 ನಿಮಿಷ ಟೈಮ್ ಕೂಡ ಕೊಟ್ಟಿರಲಿಲ್ಲ .ಕೈ ನಾಯಕರು ಟೈಮ್ ಕೊಟ್ಟಿದ್ದರೆ ನಾನು ಕಾಂಗ್ರೆಸ್ ಬಿಡುತ್ತಿರಲಿಲ್ಲ ಎಂದರು.

ಕಮಲ ಹಿಡಿದ ಜಾಧವ್: ಸೋಲಿಲ್ಲದ ಸರದಾರನಿಗೆ ಸವಾಲ್!

ಮಲ್ಲಿಕಾರ್ಜುನ ಖರ್ಗೆ ಸೇರಿ ಯಾರ ವಿರುದ್ಧವೂ ಕಣಕ್ಕಿಳಿಯಲು ಸಿದ್ಧ. ಮೈತ್ರಿ ಸರ್ಕಾರ ಉರುಳಿಸುವ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಮೊದಲಿನಿಂದಲೂ ಏಕಾಂಗಿಯಾಗಿಯೇ ನಿರ್ಣಯ ಕೈಗೊಂಡಿದ್ದೇನೆ. ಮತ್ತೆ ಯಾವ ಶಾಸಕರು ರಾಜೀನಾಮೆ ಕೊಡುತ್ತಾರೋ ಎನ್ನುವುದು ಗೊತ್ತಿಲ್ಲ ಎಂದು ಹೊಸ ಬಾಂಬ್ ಹಾಕಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Photos: 6 ವರ್ಷಗಳ ಬಳಿಕ ಮುಂಡಗೋಡಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ!
Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌