ಖರ್ಗೆ ಕಾಲಿಗೆ ಬಿದ್ದು ಟಿಕೆಟ್‌ ಪಡೆದ ರಾಠೋಡ್‌ : ಜಾಧವ್‌

Published : May 10, 2019, 10:15 AM IST
ಖರ್ಗೆ ಕಾಲಿಗೆ ಬಿದ್ದು ಟಿಕೆಟ್‌ ಪಡೆದ ರಾಠೋಡ್‌ : ಜಾಧವ್‌

ಸಾರಾಂಶ

ಕೈ ತೊರೆದು ಬಿಜೆಪಿ ಸೇರಿದ್ದ ಉಮೇಶ್ ಜಾಧವ್ ಇದೀಗ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹರಿಹಾಯ್ದಿದ್ದಾರೆ. ಕಾರಣವೇನು?

ಕಲಬುರಗಿ: ಮಲ್ಲಿಕಾರ್ಜುನ್‌ ಖರ್ಗೆ ಕಾಲಿಗೆ ಬಿದ್ದು ಸುಭಾಷ್‌ ರಾಠೋಡ್‌ ಚಿಂಚೋಳಿ ಕ್ಷೇತ್ರದ ಟಿಕೆಟ್‌ ಪಡೆದಿದ್ದಾರೆ ಎಂದು ಮಾಜಿ ಶಾಸಕ ಡಾ. ಉಮೇಶ್‌ ಜಾಧವ್‌ ಆರೋಪಿಸಿದ್ದಾರೆ. ಚಿಂಚೋಳಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಸುಭಾಷ್‌ ರಾಠೋಡ್‌ ನಾಲ್ಕೈದು ಬಾರಿ ಪಕ್ಷ ಬದಲಿಸಿದ್ದಾರೆ. 

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಹೋರಾಟ ಮಾಡಿದ್ದ ರಾಠೋಡ್‌, ಈಗ ಖರ್ಗೆ ಕಾಲಿಗೆ ಬಿದ್ದು ಕಾಂಗ್ರೆಸ್‌ ಟಿಕೆಟ್‌ ಪಡೆದಿದ್ದಾರೆ. ನಾನು ಊಟ ಮಾಡಿದ ತಟ್ಟೆಗೆ ಬೆಲೆ ಕೊಡುತ್ತೇನೆ. ಆದರೆ ಸುಭಾಷ್‌ ಊಟದ ತಟ್ಟೆಗೆ ಒದ್ದಿದ್ದಾರೆ. ಅವರನ್ನು ಜನ ತಿರಸ್ಕರಿಸುತ್ತಾರೆ ಎಂದರು. 

ಚಿಂಚೋಳಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುಭಾಷ್‌ ರಾಠೋಡ್‌ ನೀತಿಗೆಟ್ಟವರು. ಆದರೆ ನಾನು ನೀತಿಗೆಟ್ಟವನಲ್ಲ ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದೆ. ವಿಧಾನಸಭೆ ಉಪಚುನಾವಣೆಯಲ್ಲಿ ಸುಭಾಷ್‌ ಸೋತು ಮತ್ತೆ ಬೇರೆ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ನನ್ನ ರಾಜಕೀಯ ಗುರುಗಳಾಗಿದ್ದಾರೆ. ನಾಳೆ ಚಿಂಚೋಳಿ ಅವರು ತಮ್ಮ ಕೆಲಸ ತಾವು ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಯಾರ ವಿರುದ್ಧ ಬೇಕಾದರೂ ಪ್ರಚಾರ ಮಾಡಬಹುದು. ಚಿಂಚೋಳಿಯಲ್ಲಿ ಸಿದ್ದರಾಮಯ್ಯ ಅವರ ಹವಾ ಇದೆಯೇ ಎಂಬುದು ಮೇ 23ರಂದು ಗೊತ್ತಾಗಲಿದೆ. ಜಾಧವ್‌ ಅವರ ಹವಾ ಕೆಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2019ರಲ್ಲಿ 6 ಸಾವಿರಕ್ಕೆ ಕೆಲಸ, ಕೆಪಿಎಸ್ಸಿ ಸದಸ್ಯನಾದ ಬಳಿಕ 100 ಎಕರೆ ಜಮೀನು: ಇದು 'ನುಂಗಪ್ಪ' ಸಾಹುಕಾರ್‌ ಸ್ಟೋರಿ
3700 ಸರ್ಕಾರಿ ಶಾಲೆ, ಕಾಲೇಜಲ್ಲಿ ಸದ್ಯದಲ್ಲೇ ಸ್ಮಾರ್ಟ್‌ ಕ್ಲಾಸ್‌ ಶುರು, ಖಾಸಗಿ ಶಾಲೆಗಳ ಮಾದರಿ ಡಿಜಿಟಲ್‌ ಶಿಕ್ಷಣಕ್ಕೆ ಸರ್ಕಾರ ಸಿದ್ಧತೆ