
ಜಿನೆವಾ: ಅಸ್ಸಾಂನಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ರೋಹಿಂಗ್ಯಾ ವಲಸಿಗರನ್ನು ಮ್ಯಾನ್ಮಾರ್ಗೆ ಗಡೀಪಾರು ಮಾಡಿದ ಭಾರತದ ಕ್ರಮಕ್ಕೆ ವಿಶ್ವಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ.
ಮ್ಯಾನ್ಮಾರ್ನಲ್ಲಿ ರೋಹಿಂಗ್ಯಾ ಅಲ್ಪಸಂಖ್ಯಾತರ ಜನಾಂಗೀಯ ಹತ್ಯೆಯಲ್ಲಿ ಅಲ್ಲಿನ ಸೇನೆಯೇ ಸಕ್ರಿಯವಾಗಿದೆ ಎಂಬ ಆರೋಪವಿದೆ.
ಈ ಬಗ್ಗೆ ತನ್ನ ಎಚ್ಚರಿಕೆಯನ್ನೂ ನಿರ್ಲಕ್ಷಿಸಿ, ರೋಹಿಂಗ್ಯಾ ವಲಸಿಗರನ್ನು ಗಡೀಪಾರು ಮಾಡಲಾಗಿದೆ. ಗಡೀಪಾರು ಆಗಿರುವ 7 ಮಂದಿ ರೋಹಿಂಗ್ಯಾ ಮುಸ್ಲಿಮರ ಸುರಕ್ಷತೆ ಬಗ್ಗೆ ಆತಂಕವಾಗಿದೆ,’ ಎಂದು ವಿಶ್ವಸಂಸ್ಥೆ ಹೇಳಿದೆ. ಬೌದ್ಧ ಧರ್ಮೀಯರೇ ಹೆಚ್ಚಾಗಿರುವ ಮ್ಯಾನ್ಮಾರ್ನಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಮ್ಯಾನ್ಮಾರ್ ನಾಗರಿಕರೆಂದೇ ಪರಿಗಣಿಸುವುದಿಲ್ಲ. ಬದಲಿಗೆ ಅವರನ್ನು ಅಕ್ರಮ ಬೆಂಗಾಳಿಗಳು ಎಂದು ಗುರುತಿಸುತ್ತಾರೆ. ಇದೇ ಕಾರಣಕ್ಕಾಗಿ ಬೌದ್ಧ ಧರ್ಮೀಯರು ರೋಹಿಂಗ್ಯಾ ಮುಸ್ಲಿಮರ ಮೇಲೆ ದಬ್ಬಾಳಿಕೆ ನಡೆಸುತ್ತಾರೆ ಎಂಬುದು ಆರೋಪ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ