ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂದು ಪಾಕ್ ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿದ ವಿಶ್ವಸಂಸ್ಥೆ

Published : Sep 22, 2016, 06:15 AM ISTUpdated : Apr 11, 2018, 01:11 PM IST
ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂದು ಪಾಕ್ ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿದ ವಿಶ್ವಸಂಸ್ಥೆ

ಸಾರಾಂಶ

ವಿಶ್ವಸಂಸ್ಥೆ(ಸೆ. 22): ಜಮ್ಮು-ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂದು ಪಾಕಿಸ್ತಾನ ಮಾಡಿಕೊಂಡ ಮನವಿಯನ್ನು ವಿಶ್ವಸಂಸ್ಥೆ ತಿರಸ್ಕರಿಸಿದೆ. ಪಾಕಿಸ್ತಾನ ಮತ್ತು ಭಾರತ ದೇಶಗಳು ಕಾಶ್ಮೀರ ಸೇರಿದಂತೆ ತಮ್ಮ ಮಧ್ಯೆ ಇರುವ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕೀ-ಮೂನ್ ಕರೆ ನೀಡಿದ್ದಾರೆ.

ವಿಶ್ವಸಂಸ್ಥೆಯ 71ನೇ ಅಧಿವೇಶನದ ವೇಳೆ ಬಾನ್ ಕೀ ಮೂನ್ ಈ ಸಲಹೆ ನೀಡಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ದೇಶಗಳ ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮಾತುಕತೆ ಮೂಲಕ ಇತ್ಯರ್ಥ ಮಾಡಿಕೊಳ್ಳುವುದು ಎರಡೂ ದೇಶಗಳ ಹಾಗೂ ಇಡಿಯ ದಕ್ಷಿಣ ಏಷ್ಯಾ ಪ್ರದೇಶದ ಹಿತಾಸಕ್ತಿಗೆ ಒಳ್ಳೆಯದು ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗಳು ಕಿವಿ ಮಾತು ಹೇಳಿದ್ದಾರೆ.

ಈ ಮೂಲಕ ಕಾಶ್ಮೀರ ವಿಚಾರವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರಸ್ತಾಪಿಸಿ ತೃತೀಯ ಶಕ್ತಿಯ ಮಧ್ಯಪ್ರವೇಶಕ್ಕೆ ಪಾಕ್ ಮಾಡಿದ ಪ್ರಯತ್ನ ಮತ್ತೊಮ್ಮೆ ವಿಫಲವಾಗಿದೆ. ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಈ ಮೊದಲು ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಅದಕ್ಕೆ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ವಿಶ್ವಸಂಸ್ಥೆಗೆ ನೀಡಿದ್ದರು. ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ತಂಡವೊಂದನ್ನು ಕಳುಹಿಸಬೇಕೆಂದೂ ವಿಶ್ವಸಂಸ್ಥೆಗೆ ಮನವಿ ಮಾಡಿಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜರ್ಮನಿಗೆ ತೆರಳಿದ ರಾಹುಲ್ ಗಾಂಧಿ: 6 ತಿಂಗಳಲ್ಲಿ ವಿರೋಧ ಪಕ್ಷದ ನಾಯಕನ 5ನೇ ವಿದೇಶಿ ಪ್ರವಾಸ
ಎದುರುಮನೆ ಹುಡುಗಿಯೊಂದಿಗೆ ಓಡಿಹೋದ ಮಗ; ತಾಯಿಗೆ ಮನಬಂದಂತೆ ಥಳಿಸಿದ ಲೋಕಲ್ ಪೊಲೀಸ್!