ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅಸ್ವಸ್ಥ- 21 ಕಾರ್ಯಕರ್ತರು ಸಾವು!

Published : Aug 01, 2018, 05:02 PM ISTUpdated : Aug 01, 2018, 05:46 PM IST
ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅಸ್ವಸ್ಥ- 21 ಕಾರ್ಯಕರ್ತರು ಸಾವು!

ಸಾರಾಂಶ

ತಮಿಳುನಾಡು ಮಾಜಿ ಮುಖ್ಯಂತ್ರಿ ಕರುಣಾನಿಧಿ ಆನಾರೋಗ್ಯ ಕಾರ್ಯಕರ್ತರಿಗೆ ಶಾಕ್ ನೀಡಿದೆ. ಡಿಎಂಕೆ ನಾಯಕ ಆಸ್ಪತ್ರೆ ದಾಖಲಾಗುತ್ತಿದ್ದಂತೆ, ಇತ್ತ ಕಾರ್ಯಕರ್ತರು ನೋವು ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಚೆನ್ನೈ(ಆ.01): ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ನಾಯಕ ಕರುಣಾನಿಧಿ ಆರೋಗ್ಯ ಯಥಾ ಮುಂದುವರಿದಿದೆ. ತುರ್ತು ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ 94 ವರ್ಷದ ಕರುಣಾನಿಧಿ ಆಸ್ಪತ್ರೆ ದಾಖಲಾಗುತ್ತಿದ್ದಂತೆ ಕಾರ್ಯಕರ್ತರು ದಿಗ್ಬ್ರಾಂತರಾಗಿದ್ದಾರೆ.

ಕರುಣಾನಿಧಿ ಆಸ್ಪತ್ರೆ ದಾಖಲಾಗುತ್ತಿದ ಸುದ್ದಿ ಕೇಳಿ ನೋವನ್ನ ತಾಳಲಾರದ ಕಾರ್ಯಕರ್ತರು ಸಾವಿಗೆ ಶರಣಾಗುತ್ತಿದ್ದಾರೆ.  ಈ ವರೆಗೆ 21 ಡಿಎಂಕೆ ಕಾರ್ಯಕರ್ತರು ಸಾವಿಗೀಡಾಗಿದ್ದಾರೆ. ಕರುಣಾನಿಧಿ ಆರೋಗ್ಯ ಚೇತರಿಕೆ ಕಂಡಿದೆ. ಯಾವೊಬ್ಬ ಕಾರ್ಯಕರ್ತರು ಆತ್ಮಹತ್ಯೆಗೆ ಯತ್ನಿಸಬಾರದು ಎಂದು ಕರುಣಾನಿಧಿ ಪುತ್ರ, ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಮನವಿ ಮಾಡಿದ್ದಾರೆ.

ಪಕ್ಷ ಯಾವ ಕಾರ್ಯಕರ್ತರನ್ನೂ ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ಕಾರ್ಯಕರ್ತರು ತಾಳ್ಮೆ ವಹಿಸಬೇಕು ಎಂದು ಸ್ಟಾಲಿನ್, ಕಾರ್ಯಕರ್ತರಲ್ಲಿ ವಿನಂತಿಸಿದ್ದಾರೆ.  ಕರುಣಾನಿಧಿ ಆರೋಗ್ಯ ವಿಚಾರಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು, ತಮಿಳು ನಟ-ನಟಿಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಜುಲೈ 28 ರಂದು ಕರುಣಾನಿಧಿ ರಕ್ತದ ಒತ್ತಡ ಸಮಸ್ಸೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 4 ದಿನಗಳ ನಿರಂತರ ಚಿಕಿತ್ಸೆಯಿಂದ ಆರೋಗ್ಯ ಅಲ್ಪ ಚೇತರಿಕೆ ಕಂಡಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ