ಉಡುಪಿಗೆ ಭೂಗತ ಪಾತಕಿ ಬನ್ನಂಜೆ ರಾಜ

Published : Aug 27, 2018, 10:25 AM ISTUpdated : Sep 09, 2018, 09:01 PM IST
ಉಡುಪಿಗೆ  ಭೂಗತ ಪಾತಕಿ ಬನ್ನಂಜೆ ರಾಜ

ಸಾರಾಂಶ

ಭೂಗತ ಪಾತಕಿ ಬನ್ನಂಜೆ ರಾಜ ಉಡುಪಿಗೆ  ತಾಯಿಯ ಅಂತ್ಯ ಸಂಸ್ಕಾರಕ್ಕೆ ಆಗಮಿಸಲಿದ್ದಾರೆ  ಹಿಂಡಲಗಾ ಜೈಲಿನಿಂದ ಉಡುಪಿಗೆ ಪೊಲೀಸರ ಸುಪರ್ದಿಯಲ್ಲಿ ಆಗಮಿಸಲಿರುವ ರಾಜ 

ಉಡುಪಿ (ಆ. 27): ಭೂಗತ ಪಾತಕಿ ಬನ್ನಂಜೆ ರಾಜ ತಾಯಿಯ ಅಂತ್ಯಸಂಸ್ಕಾರಕ್ಕೆಂದು ಉಡುಪಿಗೆ ಆಗಮಿಸಲಿದ್ದಾರೆ. 

ಬನ್ನಂಜೆ ರಾಜನ ತಾಯಿ ವಿಲಾಸಿನಿ‌ ಶೆಟ್ಟಿಗಾರ್(78)  ಕಾಲು ಜಾರಿ ಬಿದ್ದು ಶನಿವಾರ ಸಾವನ್ನಪ್ಪಿದ್ದಾರೆ.  ಮಲ್ಪೆಯಲ್ಲಿ ನಡೆಯಲಿರುವ ಅಂತ್ಯಸಂಸ್ಕಾರದಲ್ಲಿ ಬನ್ನಂಜೆ ರಾಜ ಭಾಗವಹಿಸಲಿದ್ದಾರೆ. 

ಉಡುಪಿ ಜಿಲ್ಲಾ ಮತ್ತು‌ ಸತ್ರ ನ್ಯಾಯಾಲಯದಿಂದ‌‌ ವಿಶೇಷ ಅನುಮತಿ ಪಡೆದ ಬನ್ನಂಜೆ ರಾಜ ಬೆಳಗಾವಿ ಹಿಂಡೆಲಗ ಜೈಲಿಂದ ಉಡುಪಿ ಬಂದಿಳಿದಿದ್ದಾರೆ.  ಪೊಲೀಸ್ ಸುಪರ್ಧಿಯಲ್ಲಿ ಅಂತ್ಯಸಂಸ್ಕಾರಕ್ಕೆ  ತೆರಳಲಿದ್ದಾರೆ. 
 

ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ವಿಲಾಸಿನಿಯವರ ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿಗೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
'ಮಹಿಳೆಯರು ಇರೋದು ಗಂಡನ ಜೊತೆ ಮಲಗೋಕೆ ಮಾತ್ರ..' ವಿಜಯೋತ್ಸವ ಭಾಷಣದಲ್ಲಿ ಸಿಪಿಎಂ ನಾಯಕನ ವಿವಾದಿತ ಮಾತು