
ನವದೆಹಲಿ(ಜ.09): ದೇಶದ ಜೈಲುಗಳಲ್ಲಿ ವಿಚಾರಣಾಧೀನ ಕೈದಿಗಳ ಸಂಖ್ಯೆ ಹೆಚ್ಚುತ್ತಿದ್ದು, ಕರ್ನಾಟಕದಲ್ಲೂ ಈ ಸಂಖ್ಯೆಯಲ್ಲಿ ಏರಿಕೆ ಕಂಡಿರುವುದು ಇತ್ತೀಚಿನ ಅಂಕಿ ಅಂಶಗಳಿಂದ ತಿಳಿದುಬಂದಿದೆ. ೨೦೧೫ರಲ್ಲಿ ವಿಚಾರಣಾಧೀನ ಕೈದಿಗಳ ಸಂಖ್ಯೆ ೨.೮೨ ಲಕ್ಷ ಇದ್ದಿದ್ದುದು, ೨೦೧೬ರಲ್ಲಿ ೨.೯೩ ಲಕ್ಷಕ್ಕೆ ಏರಿಕೆಯಾಗಿದೆ ಎಂದು ಗೃಹ ಸಚಿವಾಲಯ ಸಂಸತ್ತಿನಲ್ಲಿ ಬಿಡುಗಡೆಗೊಳಿಸಿದ ಮಾಹಿತಿಯಲ್ಲಿ ತಿಳಿಸಲಾಗಿದೆ. ೨೦೦೦ರ ಇಸವಿಗೆ ಹೋಲಿಸಿದರೆ, ೧೬ ವರ್ಷಗಳಲ್ಲಿ ೧ ಲಕ್ಷ ಕೈದಿಗಳ ಸಂಖ್ಯೆ ಏರಿಕೆಯಾಗಿದೆ. ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ಮುಂತಾದ ಐದು ರಾಜ್ಯಗಳಲ್ಲಿ ಅತ್ಯಧಿಕ ಶೇ. ೫೩ರಷ್ಟು ವಿಚಾರಣಾಧೀನ ಕೈದಿಗಳಿದ್ದಾರೆ. ಉತ್ತರ ಪ್ರದೇಶ ದೇಶದಲ್ಲೇ ಅಧಿಕ ಪಾಲನ್ನು ಹೊಂದಿದ್ದು, ಅಲ್ಲಿ ೬೮,೪೩೨ ವಿಚಾರಣಾಧೀನ ಕೈದಿಗಳಿದ್ದಾರೆ. ಕರ್ನಾಟಕದಲ್ಲಿ ೧೦,೫೦೪ ಅಂತಹ ಕೈದಿಗಳಿದ್ದು, ೨೦೧೫ರಲ್ಲಿ ೯,೩೧೪ ಮಂದಿಯಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.