
ನವದೆಹಲಿ: ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಇಂದು ಮಂಡಿಸಲಾದ ಕೇಂದ್ರ ಬಜೆಟ್ ನಿರಾಶೆಯನ್ನುಂಟುಮಾಡಿದೆ.
ರಾಜ್ಯ ವಿಧಾನಸಭೆಯ ಚುನಾವಣಾ ಕಣ ರಂಗೇರುತ್ತಿರುವ ಹಿನ್ನೆಲೆಯಲ್ಲಿ, ಮೋದಿ ಸರ್ಕಾರವು ರಾಜ್ಯಕ್ಕೆ ಭರಪೂರ ಕೊಡುಗೆಗಳನ್ನು ನೀಡುತ್ತಾರೆ ಎಂದು ಜನ ನಿರೀಕ್ಷಿಸಿದ್ದರು. ಆದರೆ ಬಜೆಟ್ ಅದೆಲ್ಲವನ್ನೂ ಹುಸಿಯಾಗಿಸಿದೆ.
ಕರ್ನಾಟಕಕ್ಕೆ ಒಂದು ಮೆಡಿಕಲ್ ಕಾಲೇಜು, ಬೆಂಗಳೂರಿಗೆ ಸಬ್ ಅರ್ಬನ್ ರೈಲು ಹಾಗೂ ಐಸ್ಯಾಕ್ ಸಂಶೋಧನಾ ಕೇಂದ್ರವನ್ನು ಬಿಟ್ಟು ಯಾವುದೇ ವಿಶೇಷವಾದ ಯೋಜನೆಗಳನ್ನು ಘೋಷಿಸಲಾಗಿಲ್ಲ.
ರೈಲ್ವೆಗೆ ರೂ 1,48, 528 ಕೋಟಿಯ ಅನುದಾನ ಘೋಷಿಸಿರುವ ಜೇಟ್ಲಿ, ಬೆಂಗಳೂರಿನ ಸಬ್ ಅರ್ಬನ್ ರೈಲು ಯೋಜನೆಗೆ ₹17 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಆ ರೈಲು ಮಾರ್ಗಗಳು ಮೆಟ್ರೋ ಗೆ ಜೊಡನೆಯಾಗಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.