
ನವದೆಹಲಿ (ಜ.18): ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟವು ಅಪ್ರಸ್ತುತ ಹಾಗೂ ಅನಗತ್ಯ ಕಾನೂನಗಳನ್ನು ಹಿಂಪಡೆಯಲು ನಿರ್ಧರಿಸಿದೆ.
ರದ್ದು ಹಾಗೂ ತಿದ್ದುಪಡಿ ಮಸೂದೆ-2017ನ್ನು ಸಂಸತ್ತಿನಲ್ಲಿ ಪರಿಚಯಿಸುವ ಮೂಲಕ ಬಳಕೆಯಲ್ಲಿಲ್ಲದ ಹಾಗೂ ಅನಗತ್ಯವಾಗಿರುವ 105 ಕಾನುನುಗಳನ್ನು ಹಿಂಪಡೆಯಲು ಸಚಿವ ಸಂಪುಟವು ತೀರ್ಮಾನಿಸಿದೆ.
ವಿವಿಧ ಸಚಿವಾಲಯ ಹಾಗೂ ಇಲಾಖೆಗಳೊಂದಿಗೆ ಕೂಲಂಕಷವಾಗಿ ಸಮಾಲೋಚಿಸಿದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈವರೆಗೆ ಸುಮಾರು 73 ಇಲಾಖೆಗಳು ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಬಗ್ಗೆ ಪ್ರತಿಕ್ರಿಯೆ ನೀಡಿವೆ; 105 ಕಾಯ್ದೆಗಳನ್ನು ರದ್ದುಗೊಳಿಸಲು ಅವುಗಳು ಒಪ್ಪಿದರೆ, ಇತರ 139 ಕಾನೂನುಗಳನ್ನು ಹಿಂಪಡೆಯುವ ಬಗ್ಗೆ ಅಸಮ್ಮತಿ ಸೂಚಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.