ಇನ್ಮುಂದೆ ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ!

Published : Sep 19, 2018, 01:46 PM ISTUpdated : Sep 19, 2018, 01:52 PM IST
ಇನ್ಮುಂದೆ ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ!

ಸಾರಾಂಶ

ಕೇಂದ್ರ ಸರ್ಕಾರದ ನಹುನಿರೀಕ್ಷಿತ ತ್ರಿವಳಿ ತಲಾಕ್​ ಮಸೂದೆಗೆ ಕೊನೆಗೂ ಅನುಮೋದನೆ ದೊರೆತಿದೆ. 

ನವದೆಹಲಿ, (ಸೆ.19): ಕೇಂದ್ರ ಸರ್ಕಾರ ಬಹುನಿರೀಕ್ಷಿತ ತ್ರಿವಳಿ ತಲಾಕ್​ ಮಸೂದೆಗೆ ಕೊನೆಗೂ ಅನುಮೋದನೆ ದೊರೆತಿದೆ. 

ತ್ರಿವಳಿ ತಲಾಕ್​ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು [ಬುಧವಾರ] ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತ್ರಿವಳಿ ತಲಾಕ್​​ ನಿಷೇಧ ಸುಗ್ರೀವಾಜ್ಞೆಗೆ ಗ್ರೀನ್ ಸಿಗ್ನಲ್ ನೀಡಿದೆ. 

ತ್ರಿವಳಿ ತಲಾಕ್​​ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅನುಮೋದನೆ ದೊರೆತಿತ್ತು, ಆದರೆ, ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿರಲಿಲ್ಲ. ಇದೀಗ ರಾಜ್ಯಸಭೆಯೂ ಸಹ ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಇನ್ಮುಂದೆ ತ್ರಿವಳಿ ತಲಾಕ್​​ ಶಿಕ್ಷಾರ್ಹ ಅಪರಾಧವಾಗಲಿದೆ.

ಆಗಸ್ಟ್​ನಲ್ಲಿ ಕೇಂದ್ರ ಸರ್ಕಾರ ತ್ರಿವಳಿ ತಲಾಕ್​ ಮಸೂದೆಗೆ 3 ತಿದ್ದುಪಡಿಗಳನ್ನು ತಂದಿತ್ತು. ಪ್ರಸ್ತಾವಿತ ತಿದ್ದುಪಡಿ ಪ್ರಕಾರ, ತ್ರಿವಳಿ ತಲಾಕ್ ಜಾಮೀನು ರಹಿತ ಅಪರಾಧವಾಗಿಯೇ ಮುಂದುವರಿಯಲಿದೆ. ಆದರೆ, ಪತ್ನಿಯ ಅಭಿಪ್ರಾಯ ಪಡೆದು ನ್ಯಾಯಾಧೀಶರು ಜಾಮೀನು ನೀಡಬಹುದು. ಮಕ್ಕಳನ್ನು ತನ್ನ ವಶಕ್ಕೆ ನೀಡುವಂತೆ ತಾಯಿ ಅರ್ಜಿ ಹಾಕಬಹುದು. 

PREV
click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!