ದೇಶದ ರೈತರಿಗೆ ಭಾರೀ ಗುಡ್ ನ್ಯೂಸ್ : ಭರ್ಜರಿ ಬೆಂಬಲ ಬೆಲೆ ಘೋಷಿಸಿದ ಕೇಂದ್ರ

Published : Jul 04, 2018, 01:45 PM ISTUpdated : Jul 04, 2018, 01:47 PM IST
ದೇಶದ ರೈತರಿಗೆ ಭಾರೀ ಗುಡ್ ನ್ಯೂಸ್ : ಭರ್ಜರಿ ಬೆಂಬಲ ಬೆಲೆ ಘೋಷಿಸಿದ ಕೇಂದ್ರ

ಸಾರಾಂಶ

ರೈತರ ಕೃಷಿ ಉತ್ಪನ್ನಕ್ಕೆ ಹೆಚ್ಚಿನ ಬೆಲೆ ನೀಡುವ ತನ್ನ ಬಜೆಟ್‌ ವಾಗ್ದಾನವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಘೋಷಿಸಿದೆ.   ಭರ್ಜರಿ ಪ್ರಮಾಣದಲ್ಲಿ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿದೆ. 

ನವದೆಹಲಿ: ರೈತರ ಕೃಷಿ ಉತ್ಪನ್ನಕ್ಕೆ ಹೆಚ್ಚಿನ ಬೆಲೆ ನೀಡುವ ತನ್ನ ಬಜೆಟ್‌ ವಾಗ್ದಾನವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಘೋಷಿಸಿದೆ.   ಭರ್ಜರಿ ಪ್ರಮಾಣದಲ್ಲಿ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿದೆ. 

ಆರ್ಥಿಕ ವ್ಯವಹಾರಗಳ ಕುರಿತ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂಗಾರು ಹಂಗಾಮಿನಲ್ಲಿ ಪ್ರಮುಖವಾಗಿ ಬೆಳೆಯುವ 14 ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದೆ. 

ಪ್ರಧಾನಿ ಮೋದಿ ಸರ್ಕಾರದವು ಇತಿಹಾಸದಲ್ಲೇ ಅತೋ ದೊಡ್ಡ ಪ್ರಮಾಣದಲ್ಲಿ ಬೆಂಬಲ ಬೆಲೆ ಘೋಷಣೆ ಮಾಡಿದ್ದು, ಈ ಮೂಲಕ ರಾಜ್ಯ ಸರ್ಕಾರದಲ್ಲಿ ಸಾಲ ಮನ್ನಾ ಮಾಡುವ ಮುನ್ನವೇ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 

ಕೇಂದ್ರದ ನಿರ್ಧಾರದಿಂದ 15 ಸಾವಿರ ಕೋಟಿ ರೂ. ಹೊರೆಯಾಗಲಿದ್ದು, ಇದರಿಂದ ದೇಶದ 12 ಕೋಟಿ ರೈತರಿಗೆ ಲಾಭವಾಗಲಿದೆ.  ದೇಶದ ರಾಗಿ ಬೆಳೆಗಾರರಿಗೆ ಬಂಪರ್ ಆಫರ್ ನೀಡಿದ್ದು, ಪ್ರತಿ ಕ್ವಿಂಟಲ್ ರಾಗಿಗೆ 2,897 ರೂ. ಪಡೆಯಲಿದ್ದಾರೆ. ಶೇ.50ರಷ್ಟು ಹೆಚ್ಚುವರಿಯಾಗಿ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದೆ.  

ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳಕ್ಕೆ 2, 430 ರೂ. ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಶೇ.40ರಷ್ಟು ಹೆಚ್ಚುವರಿಯಾಗಿ ಬೆಂಬಲ ಬೆಲೆ ಘೋಷಣೆಯಾಗಿದೆ.  ಪ್ರತಿ ಕ್ವಿಂಟಲ್ ಸೂರ್ಯಕಾಂತಿ ಬೀಜಕ್ಕೆ 5, 388 ರೂ. ಬೆಂಬಲ ಬೆಲೆ ಘೋಷಿಸಿದ್ದು, ಶೇ. 31ರಷ್ಟು ಹೆಚ್ಚಿಸಿದಂತಾಗಿದೆ. ಹತ್ತಿಗೆ ಶೇ.28ರಷ್ಟುಹೆಚ್ಚಳ ಮಾಡಲಾಗಿದೆ. ಪ್ರತೀ ಕ್ವಿಂಟಾಲ್ ಎಳ್ಳಿಗೆ ಶೇ.18ರಷ್ಟು ಏರಿಕೆ ಮಾಡಲಾಗಿದೆ. ಭತ್ತಕ್ಕೆ 200 ರು. ಹೆಚ್ಚಳ ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಶಾಸಕಿ ನಯನಾ ಮೊಟಮ್ಮಗೂ ಅಶ್ಲೀಲ ಕಾಮೆಂಟ್ಸ್ ಕಾಟ; ಕಿಡಿಗೇಡಿಗಳಿಗೆ ಖಡಕ್ ವಾರ್ನಿಂಗ್!
'ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾದ್ದು ಕೊ*ಲೆ..' ಪೊಲೀಸರಿಗೆ ಈ ಅನುಮಾನ ಬಂದಿದ್ದಕ್ಕೆ ಇದೇ ಕಾರಣ..