
ನವದೆಹಲಿ: ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ನಿಟ್ಟಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು ಕೇರಳಕ್ಕೆ ಆಹಾರ ಧಾನ್ಯಗಳ ಪೂರೈಕೆ ಮಾಡಲು ಕೇಂದ್ರ ನಿರ್ಧರಿಸಿದೆ.
ಪರಿಹಾರ ಕಾರ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಕೇರಳಕ್ಕೆ 89540 ಟನ್ ಆಹಾರಧಾನ್ಯ ಮತ್ತು 100 ಟನ್ ದ್ವಿದಳ ಧಾನ್ಯ ರವಾನಿಸಲಾಗುವುದು ಎಂದು ಕೇಂದ್ರ ನಾಗರಿಕ ಪೂರೈಕೆ ಖಾತೆ ಸಚಿವ ರಾಂ ವಿಲಾಸ್ ಪಾಸ್ವಾನ್ ಘೋಷಿಸಿದ್ದಾರೆ.
ಆಹಾರ ಭದ್ರತಾ ಕಾಯ್ದೆ ವ್ಯಾಪ್ತಿಗೆ ಬರದ ಜನರಿಗೆ ಇದರಿಂದ ನೆರವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
600 ಕೋಟಿ ನೆರವು
ಪ್ರವಾಹ ಪೀಡಿತ ಕೇರಳಕ್ಕೆ ಕೇಂದ್ರ ಸರ್ಕಾರ ಮಂಗಳವಾರ 600 ಕೋಟಿ ರು. ಬಿಡುಗಡೆ ಮಾಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ನೆರವನ್ನು ಘೋಷಿಸಲಾಗಿದೆ. ಕೇರಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು 500 ಕೋಟಿ ರು. ನೆರವು ಪ್ರಕಟಿಸಿದ್ದರು. ಜೊತೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು 100 ಕೋಟಿ ರು. ನೆರವು ಘೋಷಿಸಿದ್ದರು. ಆ ಹಣವನ್ನು ಇದೀಗ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.