ಎಸ್‌ಸ್ಸಿ-ಎಸ್ಟಿ ಕಾಯ್ದೆಗಳ ಮೂಲ ನಿಬಂಧನೆಗಳಿಗೆ ಕೇಂದ್ರ ಅಸ್ತು?

Published : Aug 01, 2018, 09:11 PM IST
ಎಸ್‌ಸ್ಸಿ-ಎಸ್ಟಿ ಕಾಯ್ದೆಗಳ ಮೂಲ ನಿಬಂಧನೆಗಳಿಗೆ ಕೇಂದ್ರ ಅಸ್ತು?

ಸಾರಾಂಶ

‘ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ’ ಯನ್ನು ಇದ್ದ ಸ್ವರೂಪದಲ್ಲೇ ಮಂಡಿಸಲು ಕೇಂದ್ರ ಸರಕಾರ ತೀರ್ಮಾನ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆ ಈ ತೀರ್ಮಾನಕ್ಕೆ ಬಂದಿದ್ದು ಈ ಬಾರಿಯ ಅಧಿವೇಶನದಲ್ಲಿಯೇ ಬಿಲ್ ಪಾಸ್ ಆಗಲಿದೆ.

ನವದೆಹಲಿ(ಆ 1) ಕೇಂದ್ರ ಸಚಿವ ಸಂಪುಟವು ದಲಿತ ದೌರ್ಜನ್ಯ ತಡೆ ಕಾಯ್ದೆ(1989)ಯ ಯಥಾಸ್ಥಿತಿಯಲ್ಲಿಯೇ ಮುಂದುವರಿಸಲು ತೀರ್ಮಾನ ಮಾಡಿದೆ.

ಜಾತಿ ನಿಂದನೆ ಪ್ರಕರಣದ ದೂರು ದಾಖಲಾದ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕು. ಆತನನ್ನು ಪೊಲೀಸ್ ಕಸ್ಟಡಿಗೆ ವಹಿಸಬೇಕು ಎಂಬ ವಿಚಾರಗಳು ಒಂದು ಕಡೆ ಇದ್ದರೆ ಇದು ಮಾನವ ಹಕ್ಕುಗಳ ಉಲ್ಲಂಘನೆ ಎಂಬ ವಾದ ಮತ್ತೊಂದು ಕಡೆಯಿಂದ ಇತ್ತು.  ಆದರೆ ಕೇಂದ್ರ ಸರಕಾರ ಯಥಾ ಸ್ಥಿತಿ ಎಂದು ಹೇಳಿದ್ದು ಸಂಸತ್ತಿನಲ್ಲಿ ಇನ್ನೊಂದು ಸುತ್ತಿನ ಚರ್ಚೆ ನಡೆಯಲಿದೆ

‘ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ –1989 ಅನ್ನು ಕೇಂದ್ರ ಸರಕಾರ ದುರ್ಬಲಗೊಳಿಸುತ್ತಿದೆ’ ಎಂದು ದಲಿತ ಸಂಘಟನೆಗಳು ಆರೋಪಿಸಿದರು. ದಲಿತರ ಆಕ್ರೋಶದಿಂದ ಎಚ್ಚೆತ್ತ ಕೇಂದ್ರ ಸರ್ಕಾರ, ತೀರ್ಪನ್ನು ಮರು ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!