
ನವದೆಹಲಿ(ಆ 1) ಕೇಂದ್ರ ಸಚಿವ ಸಂಪುಟವು ದಲಿತ ದೌರ್ಜನ್ಯ ತಡೆ ಕಾಯ್ದೆ(1989)ಯ ಯಥಾಸ್ಥಿತಿಯಲ್ಲಿಯೇ ಮುಂದುವರಿಸಲು ತೀರ್ಮಾನ ಮಾಡಿದೆ.
ಜಾತಿ ನಿಂದನೆ ಪ್ರಕರಣದ ದೂರು ದಾಖಲಾದ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕು. ಆತನನ್ನು ಪೊಲೀಸ್ ಕಸ್ಟಡಿಗೆ ವಹಿಸಬೇಕು ಎಂಬ ವಿಚಾರಗಳು ಒಂದು ಕಡೆ ಇದ್ದರೆ ಇದು ಮಾನವ ಹಕ್ಕುಗಳ ಉಲ್ಲಂಘನೆ ಎಂಬ ವಾದ ಮತ್ತೊಂದು ಕಡೆಯಿಂದ ಇತ್ತು. ಆದರೆ ಕೇಂದ್ರ ಸರಕಾರ ಯಥಾ ಸ್ಥಿತಿ ಎಂದು ಹೇಳಿದ್ದು ಸಂಸತ್ತಿನಲ್ಲಿ ಇನ್ನೊಂದು ಸುತ್ತಿನ ಚರ್ಚೆ ನಡೆಯಲಿದೆ
‘ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ –1989 ಅನ್ನು ಕೇಂದ್ರ ಸರಕಾರ ದುರ್ಬಲಗೊಳಿಸುತ್ತಿದೆ’ ಎಂದು ದಲಿತ ಸಂಘಟನೆಗಳು ಆರೋಪಿಸಿದರು. ದಲಿತರ ಆಕ್ರೋಶದಿಂದ ಎಚ್ಚೆತ್ತ ಕೇಂದ್ರ ಸರ್ಕಾರ, ತೀರ್ಪನ್ನು ಮರು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.