ಪರಿಹಾರ ಕೇಂದ್ರದಲ್ಲಿ ರಾತ್ರಿ ಕಳೆದ ಕೇಂದ್ರ ಸಚಿವ ಅಲ್ಫೋನ್ಸ್‌

Published : Aug 23, 2018, 10:50 AM ISTUpdated : Sep 09, 2018, 09:10 PM IST
ಪರಿಹಾರ ಕೇಂದ್ರದಲ್ಲಿ ರಾತ್ರಿ ಕಳೆದ ಕೇಂದ್ರ ಸಚಿವ ಅಲ್ಫೋನ್ಸ್‌

ಸಾರಾಂಶ

ಕೇರಳದ ನಿರಾಶ್ರಿತರ ಶಿಬಿರದಲ್ಲಿ  ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಸಚಿವ ಅಲ್ಫೋನ್ಸ್‌ ಕಣ್ಣನ್‌ಥಾನಂ ಮಂಗಳವಾರ ರಾತ್ರಿ ಕಳೆದಿದ್ದಾರೆ. ಈ ಫೊಟೊವನ್ನು ಅವರು ಟ್ವಿಟ್ಟರ್ ನಲ್ಲಿ ಶೇರ್ ಮಾಡಿ ಕೊಂಡಿದ್ದಾರೆ. 

ತಿರುವನಂತಪುರ: ಪ್ರವಾಹ ಪೀಡಿತ ಕೇರಳದ ಪರಿಹಾರ ಕೇಂದ್ರವೊಂದರಲ್ಲಿ, ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಸಚಿವ ಅಲ್ಫೋನ್ಸ್‌ ಕಣ್ಣನ್‌ಥಾನಂ ಮಂಗಳವಾರ ರಾತ್ರಿ ಕಳೆದಿದ್ದಾರೆ. ಚಂಗನಶ್ಶೇರಿಯ ಎಸ್‌ಬಿ ಪ್ರೌಢ ಶಾಲೆಯಲ್ಲಿನ ನಿರಾಶ್ರಿತರ ಶಿಬಿರದಲ್ಲಿ ತಾವು ಮಲಗಿರುವ ಫೋಟೋವನ್ನು ಅಲ್ಪೋನ್ಸ್‌ ಟ್ವೀಟ್‌ ಮಾಡಿದ್ದಾರೆ. 

‘ನಿರಾಶ್ರಿತರ ಪರಿಹಾರ ಕೇಂದ್ರದಲ್ಲೇ ಮಲಗಲು ನಿರ್ಧರಿಸಿದ್ದೇನೆ,’ ಎಂಬ ಕ್ಯಾಪ್ಷನ್‌ ಅನ್ನು ಕ್ಯಾಂಪ್‌ನಲ್ಲೇ ಮಲಗಿದ್ದ ಫೋಟೊಗಳನ್ನು ಅವರು ಟ್ವೀಟ್‌ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಹಲವು ಟ್ವೀಟಿಗರು, ಮಲಗಿರುವ ವ್ಯಕ್ತಿ ತನ್ನ ಫೋಟೋ ತಾನೇ ತೆಗೆದುಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 

ಮಲಗಿರುವ ವ್ಯಕ್ತಿಯ ಫೋಟೊಗಳನ್ನು ತೆಗೆದು, ನಂತರ ಫೇಸ್‌ಬುಕ್‌ನಲ್ಲಿ ತಾನೇ ಫೋಟೊಗಳನ್ನು ಅಪ್ಲೋಡ್‌ ಮಾಡುವ ಫೋನ್‌ ನಿಜಕ್ಕೂ ಅದ್ಭುತ. ನನಗೂ ಇಂಥ ಫೋನ್‌ನ ಅಗತ್ಯವಿದೆ ಎಂದೆಲ್ಲಾ ಜನ ವ್ಯಂಗ್ಯವಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ