
ನವದೆಹಲಿ[ಜ.13] ದೆಹಲಿಯಲ್ಲಿ ನಡೆಯುತ್ತಿದ್ದ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆಯ ವೇಳೆ ವೇದಿಕೆ ಏರಲು ಮುಂದಾದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಕೆಳಕ್ಕೆ ಇಳಿದಿದ್ದಾರೆ.
ಕೇಂದ್ರ ಸಚಿವರಿಗೆ ವೇದಿಕೆಯಿಂದ ಕೆಳಗೆ ಇಳಿಯಲು ಬಿಎಸ್ವೈ ಸೂಚನೆ ನೀಡಿದ್ದಾರೆ ಎಂಬ ಮಾತು ಒಮ್ಮೆ ಕೇಳಿಬಂದಿತ್ತು. ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ಹಿರಿಯ ನಾಯಕರಿಗೆ ಆಸನ ವ್ಯವಸ್ಥೆ ಕಲ್ಪಿಸಲು ಹೆಗಡೆ ಕೆಳಕ್ಕೆ ಇಳಿದಿದ್ದಾರೆ.
ಆಪರೇಷನ್ ಸಂಕ್ರಾಂತಿಗೆ ಉತ್ಸಾಹ ತೋರದ ಯಡಿಯೂರಪ್ಪ?
ಪ್ರಹ್ಲಾದ್ ಜೋಶಿ ರಾಜ್ಯ ಬಿಜೆಪಿಯನ್ನು ಅಧ್ಯಕ್ಷರಾಗಿ ಮುಂದೆ ನಡೆಸಿದ್ದವರು. ಹಾಗಾಗಿ ಈ ಕಾರಣಕ್ಕೆ ಹೆಗಡೆ ಅವರಿಗೆ ಆಸನ ಬಿಟ್ಟುಕೊಟ್ಟಿದ್ದಾರೆ ವೇದಿಕೆಯಿಂದ ಕೆಳಗಿಳಿದು 2ನೇ ಸಾಲಿನಲ್ಲಿ ಕುಳಿತ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸಭೆಯಲ್ಲಿನ ಚರ್ಚೆಯಲ್ಲಿ ಪಾಲ್ಗೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.