ನಾಗಪುರದಲ್ಲಿ ಕೇಂದ್ರ ಸಚಿವ ಗಡ್ಕರಿ ಪುತ್ರಿಯ ಅದ್ದೂರಿ ವಿವಾಹ

Published : Dec 04, 2016, 11:45 AM ISTUpdated : Apr 11, 2018, 12:58 PM IST
ನಾಗಪುರದಲ್ಲಿ ಕೇಂದ್ರ ಸಚಿವ ಗಡ್ಕರಿ ಪುತ್ರಿಯ ಅದ್ದೂರಿ ವಿವಾಹ

ಸಾರಾಂಶ

ಕೇತ್ಕಿ ಈ ವಿವಾಹಕ್ಕೆ 10,000ಕ್ಕಿಂತಲೂ ಹೆಚ್ಚು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಮದುವೆ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಉದ್ಯಮಿಗಳಾದ ಮುಕೇಶ್ ಅಂಬಾನಿ, ರತನ್ ಟಾಟಾ, ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಸೇರಿದಂತೆ ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

ನಾಗಪುರ (ಡಿ.04): ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಪುತ್ರಿ ಕೇತ್ಕಿ ವಿವಾಹ ಇಂದು  ನಾಗ್ಪುರದ ವಾದ್ರಾ ರಸ್ತೆಯಲ್ಲಿರುವ 'ರಾಣಿ ಕೋಟಿ'ಯಲ್ಲಿ ನೆರವೇರಿತು..

ಕೇತ್ಕಿ ಈ ವಿವಾಹಕ್ಕೆ 10,000ಕ್ಕಿಂತಲೂ ಹೆಚ್ಚು ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ಮದುವೆ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಡ್ನಾವಿಸ್, ಕೇಂದ್ರ ಸಚಿವರಾದ ಮನೇಕಾ ಗಾಂಧಿ, ಪ್ರಕಾಶ್ ಜವಾಡೆಕರ್, ಹಂಸರಾಜ್ ಆಹಿರ್, ಪಿಯುಶ್ ಗೋಯಲ್, ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ,  ಎಂಎನ್’ಎಸ್’ನ ರಾಜ್ ಠಾಕ್ರೆ,  ಎನ್’ಸಿಪಿ ಮುಖಂಡ ಶರದ್ ಪವಾರ್, ಪ್ರಫುಲ್ ಪಟೇಲ್, ಹಾಗೂ ಯೋಗ ಗುರು ರಾಮ್ ದೇವ್ ಮುಂತಾದ ಗಣ್ಯರು ಭಾಗವಹಿಸಿದ್ದಾರೆ.

 ಗಡ್ಕರಿಯ ಕಿರಿಯ ಪುತ್ರಿ ಕೇತ್ಕಿ ನಾಗಪುರದ ಆದಿತ್ಯ ಎಂಬವರನ್ನು ವಿವಾಹವಾಗಿದ್ದು, ಅವರು ಅಮೆರಿಕಾದಲ್ಲಿ ಫೇಸ್‍ಬುಕ್ ಸಂಸ್ಥೆಯ ಉದ್ಯೋಗಿಯಾಗಿದ್ದಾರೆ.  ಇನ್ನು ನಿತಿನ್ ಗಡ್ಕರಿ ಪುತ್ರಿಯ ವಿವಾಹಕ್ಕೆ ಆಗಮಿಸುವ ಗಣ್ಯರಿಗಾಗಿ ಬರೋಬ್ಬರಿ 50 ವಿಮಾನಗಳಲ್ಲಿ ಟಿಕೆಟ್ ಕಾಯ್ದಿರಿಸಲಾಗಿತ್ತು ಎಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆ ಕಾಯ್ದೆ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧವಲ್ಲ: ಬಿ.ಕೆ.ಹರಿಪ್ರಸಾದ್‌ ಲೇಖನ
ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಸರ್ಕಾರದ ನೆರವು ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್