ಜನಕ ಮಹಾರಾಜನಾಗಿ ರಂಗದಲ್ಲಿ ವಿಜೃಂಭಿಸಿದ ಕೇಂದ್ರ ಸಚಿವ

Published : Oct 13, 2018, 03:33 PM IST
ಜನಕ ಮಹಾರಾಜನಾಗಿ ರಂಗದಲ್ಲಿ ವಿಜೃಂಭಿಸಿದ ಕೇಂದ್ರ ಸಚಿವ

ಸಾರಾಂಶ

ಕೇಂದ್ರ ವಿಜ್ಞಾನ, ತಂತ್ರಜ್ಞಾನ ಹಾಗೂ ಪರಿಸರ ಸಚಿವ ಡಾ. ಹರ್ಷವರ್ಧನ್  ಅವರು ರಾಮಾಯಣದ ವಿದೇಹ ಸಾಮ್ರಾಜ್ಯದ ರಾಜನಾಗಿದ್ದ ಜನಕರಾಜನ ಪಾತ್ರದಲ್ಲಿ ರಂಗಮಂಟಪದಲ್ಲಿ ಕಾಣಿಸಿಕೊಂಡರು.

ನವದೆಹಲಿ[ಅ.13]: ಸಾಂಪ್ರಾದಾಯಿಕ ರೇಷ್ಮೆ ಧರಿಸು, ಮಿಂಚಿನ ಕಿರೀಟ, ರಾಜ ಗಾಂಭೀರ್ಯ, ಸುಲಲಿತ ಪರಿಶುದ್ಧ ಹಿಂದಿಯ ಸಂಭಾಷಣೆಗಳು. ಇದು ಯಾವುದೋ ಪೌರಾಣಿಕ ನಾಟಕದ ದೃಶ್ಯವಲ್ಲ ಸ್ವತಃ ಕೇಂದ್ರ ಸಚಿವರು ರಂಗದ ಮೇಲೆ ಮಿಂಚಿದ ಪರಿ. 

ಕೇಂದ್ರ ವಿಜ್ಞಾನ, ತಂತ್ರಜ್ಞಾನ ಹಾಗೂ ಪರಿಸರ ಸಚಿವ ಡಾ.ಹರ್ಷವರ್ಧನ್ ಅವರು ರಾಮಾಯಣದ ವಿದೇಹ ಸಾಮ್ರಾಜ್ಯದ ರಾಜನಾಗಿದ್ದ ಜನಕರಾಜನ ಪಾತ್ರದಲ್ಲಿ ರಂಗಮಂಟಪದಲ್ಲಿ ಕಾಣಿಸಿಕೊಂಡರು. ರಾಮ್ ಲೀಲಾ ಕಾರ್ಯಕ್ರಮದ ಅಂಗವಾಗಿ ಕೆಂಪು ಕೋಟೆಯ ಮೈದಾನದಲ್ಲಿ ಲವಕುಶ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸೀತೆಯ ಸಾಕು ತಂದೆಯಾಗಿ ಸಭಿಕರನ್ನು ರಂಜಿಸಿದರು. 

ಆ ಕಾಲಕ್ಕೆ ಪರಿಸರ ಸಂರಕ್ಷಣೆಗಾಗಿ ಜನಕರಾಜ ಹಲವು ಜನಪ್ರಿಯ ಕಾರ್ಯಕ್ರಗಳನ್ನು ಕೈಗೊಂಡಿದ್ದರು. ಶುದ್ಧ ಗಾಳಿ, ಉತ್ತಮ ಆರೋಗ್ಯಕ್ಕಾಗಿ ಪರಿಸರ ರಕ್ಷಿಸಿಕೊಳ್ಳುವ ಸಂದೇಶವನ್ನು ಜನಕನ ಪಾತ್ರದ ಮೂಲಕ ಸಾರ್ವಜನಿಕರಿಗೆ ಸಾರಿದರು. ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಸೇರಿದಂತೆ ಹಲವು ಕಲಾವಿದರು ಹಾಗೂ ರಾಜಕಾರಣಿಗಳು ರಾಮಲೀಲಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ
ಪ್ರೀತಿಯಿಂದ ಊಟಕ್ಕೆ ಕರೀತಾರೆ ಬೇಡ ಅನ್ನೋಕಾಗುತ್ತಾ: ಡಿ.ಕೆ.ಶಿವಕುಮಾರ್