
ನವದೆಹಲಿ(ಅ.14): : #ಮೀ ಟೂ ಅಭಿಯಾನದಲ್ಲಿ ತಮ್ಮ ವಿರುದ್ಧ ಮಾಡಿರುವ ಲೈಂಗಿಕ ಆರೋಪ ನಿರಾಧಾರವಾಗಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಎಂ. ಜೆ. ಅಕ್ಬರ್ ಹೇಳಿದ್ದಾರೆ.
ಯಾವುದೇ ಆಧಾರ ಇಲ್ಲದೆ ತಮ್ಮ ವಿರುದ್ಧ ಮಾಡಿರುವ ಆರೋಪ ಸಾಮಾಜಿಕ ಜಾಲತಾಣಗಳ ಮೂಲಕ ವೈರಲ್ ಆಗಿದೆ. ಈ ನಿರಾಧಾರ ಆರೋಪ ಕುರಿತು ಮುಂದೆ ಕೈಗೊಳ್ಳಬೇಕಾದ ಕ್ರಮ ಕುರಿತು ವಕೀಲರು ನೋಡಿಕೊಳ್ಳಲಿದ್ದಾರೆ ಎಂದು ಅಕ್ಬರ್ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಇರುವಂತೆಯೇ ಈ ವಿವಾದ ಉದ್ಬವಿಸಿರುವುದು ಏಕೆ ಎಂದು ಅಕ್ಬರ್ ಪ್ರಶ್ನಿಸಿದ್ದು, ತಮ್ಮ ವರ್ಚಸ್ಸು ಹಾಳು ಮಾಡುವ ಸಂಚು ಈ ಆರೋಪದ ಹಿಂದಿರುವುದಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವನ್ನು ತಳ್ಳಿ ಹಾಕಿದ ಅಕ್ಬರ್, ತಪ್ಪು ಮಾಡದೇ ಇದ್ದ ಮೇಲೆ ಏತಕ್ಕಾಗಿ ರಾಜೀನಾಮೆ ನೀಡಲಿ ಎಂದು ಪ್ರಶ್ನಸಿದ್ದಾರೆ.
ರಾಜಕೀಯ ಪ್ರವೇಶಕ್ಕೂ ಮುನ್ನ ಅಕ್ಬರ್ ಹಲವು ಪತ್ರಿಕೆಗಳಲ್ಲಿ ಸಂಪಾದಕರಾಗಿದ್ದ ವೇಳೆಯಲ್ಲಿ, ಅನೇಕ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಬೇಕೆಂಬ ಒತ್ತಡವೂ ಹೆಚ್ಚಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.