
ನವದೆಹಲಿ : ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವವನ್ನು ಧಿಕ್ಕರಿಸಿ ಕುಟುಂಬ ರಾಜಕಾರಣ ಮಾಡಲಾಗುತ್ತಿದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವಾಗ್ದಾಳಿ ನಡೆಸಿದ್ದಾರೆ.
ನಾವು ಶ್ರೀಮಂತ ದೇಶವನ್ನು ಬಡ ಜನಸಂಖ್ಯೆಯನ್ನು ಹೊಂದಿದವರು. ಕೆಲವರು ಅವರ ಕುಟುಂಬಗಳಿಗೆ ಮಾತ್ರವೇ ಅನುಕೂಲವನ್ನು ಮಾಡಿಕೊಳ್ಳುತ್ತಾರೆ. ಪ್ರಧಾನಿ ಪ್ರಧಾನಿಗೆ ಜನ್ಮ ನೀಡುತ್ತಾರೆ. ಮುಖ್ಯಮಂತ್ರಿ ಮುಖ್ಯಮಂತ್ರಿಗೆ ಜನ್ಮ ನೀಡುತ್ತಾರೆ.
ಇದರಿಂದ ಪ್ರಜಾಪ್ರಭುತ್ವ ಎನ್ನುವುದೇ ಮುಚ್ಚಿ ಹೋಗಿದೆ. ಆದರೆ ಇದನ್ನು ಬಿಜೆಪಿ ಬದಲಾಯಿಸಿದೆ ಎಂದು ವಾಕ್ ಪ್ರಹಾರ ನಡೆಸಿದ್ದಾರೆ.
ಅಲ್ಲದೇ ಬಿಜೆಪಿ ಓರ್ವ ವ್ಯಕ್ತಿಯ ಹೆಸರಿನಲ್ಲಿ ಎಂದಿಗೂ ನಡೆಯುತ್ತಿಲ್ಲ. ಇದು ಒಂದು ಕುಟುಂಬದ ಪಕ್ಷವಲ್ಲ. ಒಂದು ಜಾತಿ, ಒಂದು ಧರ್ಮ, ಭಾಷೆ ಸೀಮಿತವಾಗಿಲ್ಲ. ನಮ್ಮ ಪಕ್ಷ ಎಂದಿಗೂ ಯಾವ ವ್ಯಕ್ತಿಯಿಂದ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.