OROP ಆತ್ಮಹತ್ಯೆ: ಮೃತ ಯೋಧನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ

Published : Nov 02, 2016, 01:18 PM ISTUpdated : Apr 11, 2018, 12:36 PM IST
OROP ಆತ್ಮಹತ್ಯೆ: ಮೃತ ಯೋಧನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ

ಸಾರಾಂಶ

ರಾಮ್ ಕಿಶನ್ ಗ್ರೆವಾಲ್ ಎಂಬ ನಿವೃತ್ತ ಯೋಧ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಮಾನ ಹುದ್ದೆ-ಸಮಾನ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಆಗುತ್ತಿರುವ ವಿಳಂಬದಿಂದ ನೊಂದಿದ್ದರು ಎನ್ನಲಾಗಿದೆ.

ನವದೆಹಲಿ (ನ.02): ಸಮಾನ ಹುದ್ದೆ-ಸಮಾನ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ವಿಳಂಬದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಯೋಧನ ಮಾನಸಿಕ ಆರೋಗ್ಯದ ಬಗ್ಗೆ ಹೇಳಿಕೆ ನೀಡಿ ಕೇಂದ್ರ ಮಂತ್ರಿ ವಿವಾದವನ್ನು ಸೃಷ್ಟಿಸಿದ್ದಾರೆ.

ಆ ಮಾಜಿ ಯೋಧ ಆತ್ಮಹತ್ಯೆ ಮಾಡಿಕೊಂಡ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆತನ ಮಾನಸಿಕ ಆರೋಗ್ಯ ಹೇಗಿತ್ತು ಎಂದು ಯಾರಿಗೂ ಗೊತ್ತಿಲ್ಲ. ಆ ಬಗ್ಗೆ ತನಿಖೆಯಾಗಬೇಕು. ಸಮಾನ ಹುದ್ದೆ-ಸಮಾನ ಪಿಂಚಣಿ ಯೋಜನೆಯನ್ನು ರಾಜಕೀಯಕರಣಗೊಳಿಸಬಾರದು, ಎಂದು ಕೇಂದ್ರ ಸಚಿವರೂ, ಭೂಸೇನೆಯ ನಿವೃತ್ತ ಮುಖ್ಯಸ್ಥರೂ ಆಗಿರುವ ವಿ,ಕೆ.ಸಿಂಗ್ ಹೇಳಿದ್ದಾರೆ.

ರಾಮ್ ಕಿಶನ್ ಗ್ರೆವಾಲ್ ಎಂಬ ನಿವೃತ್ತ ಯೋಧ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಮಾನ ಹುದ್ದೆ-ಸಮಾನ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಆಗುತ್ತಿರುವ ವಿಳಂಬದಿಂದ ನೊಂದಿದ್ದರು ಎನ್ನಲಾಗಿದೆ.

ಗ್ರೆವಾಲ್ ಕುಟುಂಬಸ್ಥರು, ಆತ್ಮಹತ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ ಹಾಗೂ ಆತ್ಮಹತ್ಯೆ  ಮಾಡಿಕೊಳ್ಳುವ ಮುಂಚೆ ಗ್ರೆವಾಲ್ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್’ಗೆ ಪತ್ರ ಬರೆದಿದ್ದರು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ