ಕೊರೋನಾ ನಡು​ವೆ ದಾಖಲೆ ರಸಗೊಬ್ಬರ ಪೂರೈಕೆ: ಸದಾನಂದ ಗೌಡ

Kannadaprabha News   | Asianet News
Published : Feb 13, 2021, 09:41 AM IST
ಕೊರೋನಾ ನಡು​ವೆ ದಾಖಲೆ ರಸಗೊಬ್ಬರ ಪೂರೈಕೆ: ಸದಾನಂದ ಗೌಡ

ಸಾರಾಂಶ

ಬಿತ್ತನೆ ಪ್ರದೇಶವೃದ್ಧಿಸಿ ರಸಗೊಬ್ಬರ ಬೇಡಿಕೆ ಹೆಚ್ಚಾ​ದಾಗ ಅದಕ್ಕೆ ತಕ್ಕಂತೆ ಪೂರೈಕೆ ವ್ಯವಸ್ಥೆ ಮಾಡಿ ಎಲ್ಲೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಯಿತು. ಇದರಿಂದಾಗಿ ಕೃಷಿವಲಯ ಶೇ. 3.7ರಷ್ಟು ಬೆಳವಣಿಗೆ ಸಾಧಿಸಲು ಸಾಧ್ಯವಾಯಿತು ಎಂದು ಮಾಹಿತಿ ನೀಡಿ​ದ​ ಸಚಿವ ಡಿ.ವಿ.ಸದಾನಂದ ಗೌಡ  

ನವದೆಹಲಿ(ಫೆ.13): ಕೊರೋನಾ ಸಂಕಷ್ಟದ ನಡು​ವೆಯೂ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲ ರಸಗೊಬ್ಬರ ಪೂರೈಕೆ ಶೇ.25ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ರಾಜ್ಯ ಸಭೆಯಲ್ಲಿ ಶುಕ್ರ​ವಾರ ಪ್ರಶ್ನೋತ್ತರ ವೇಳೆ ಉತ್ತ​ರ​ಪ್ರ​ದೇ​ಶದ ಜಿ.ಬಿ.ಎಲ್‌. ನರಸಿಂಹರಾವ್‌ ಅವರು ಕೇಳಿದ ಪೂರಕ ಪ್ರಶ್ನೆಗೆ ಉತ್ತ​ರಿ​ಸಿದ ಸದಾ​ನಂದ ಗೌಡ, ಕೊರೋನಾ ಅವ​ಧಿಯಲ್ಲಿ ರಸಗೊಬ್ಬರ ಉತ್ಪಾದನೆ ಮತ್ತು ಸಾಗಣೆ ಬಹು​ದೊ​ಡ್ಡ ಸವಾ​ಲಾ​ಗಿತ್ತು. ಆದರೆ ಇವನ್ನೆಲ್ಲ ಸಮರ್ಪಕವಾಗಿ ನಿಭಾಯಿ​ಸ​ಲಾ​ಯಿತು. ಬಿತ್ತನೆ ಪ್ರದೇಶವೃದ್ಧಿಸಿ ರಸಗೊಬ್ಬರ ಬೇಡಿಕೆ ಹೆಚ್ಚಾ​ದಾಗ ಅದಕ್ಕೆ ತಕ್ಕಂತೆ ಪೂರೈಕೆ ವ್ಯವಸ್ಥೆ ಮಾಡಿ ಎಲ್ಲೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲಾಯಿತು. ಇದರಿಂದಾಗಿ ಕೃಷಿವಲಯ ಶೇ. 3.7ರಷ್ಟು ಬೆಳವಣಿಗೆ ಸಾಧಿಸಲು ಸಾಧ್ಯವಾಯಿತು ಎಂದು ಸಚಿವರು ಮಾಹಿತಿ ನೀಡಿ​ದ​ರು.

ಅರ್ಹತೆ ಇಲ್ಲದವರು ಮೀಸಲಾತಿ ಕೇಳೋದು ರಾಜಕೀಯ ನಾಟಕ: ಸದಾನಂದ ಗೌಡ

ಉಪ ರಾಷ್ಟ್ರ​ಪತಿ ಮೆಚ್ಚು​ಗೆ: 

ಸಭಾ​ಪತಿ ಪೀಠ​ದ​ಲ್ಲಿದ್ದ ಉಪ​ರಾ​ಷ್ಟ್ರ​ಪತಿ ವೆಂಕಯ್ಯ ನಾಯ್ಡು ಅವರು ಕೊರೋನಾದ ನಡು​ವೆಯೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಂಡದ್ದಕ್ಕೆ ಸಚಿವ ಡಿ.ವಿ. ಸದಾನಂದಗೌಡರನ್ನು ಅಭಿನಂದಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!
15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ