ಸಚಿವರಾಗುತ್ತಿದ್ದಂತೆ ಸದಾನಂದಗೌಡರಿಂದ ರಾಜ್ಯಕ್ಕೆ ಭರವಸೆ

Published : Jun 02, 2019, 07:57 AM IST
ಸಚಿವರಾಗುತ್ತಿದ್ದಂತೆ ಸದಾನಂದಗೌಡರಿಂದ ರಾಜ್ಯಕ್ಕೆ ಭರವಸೆ

ಸಾರಾಂಶ

ಸಚಿವರಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಕೇಂದ್ರ ರಸಗೊಬ್ಬರ ಸಚಿವರಾದ ಸದಾನಂದಗೌಡ ಅವರು ರಾಜ್ಯಕ್ಕೆ ಭರವಸೆ ನೀಡಿದ್ದಾರೆ.

ಬೆಂಗಳೂರು : ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು, ರಾಜ್ಯದ ಅಗತ್ಯಗಳ ಕುರಿತು ಚರ್ಚಿಸಲು ರಾಜ್ಯವನ್ನು ಪ್ರತಿನಿಧಿಸಿರುವ 4 ಕೇಂದ್ರ ಸಚಿವರು 15 ದಿನ ಕ್ಕೊಮ್ಮೆ ಸಭೆ ನಡೆಸುತ್ತೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರಸ ಗೊಬ್ಬರ ಹಾಗೂ ರಾಸಾಯನಿಕ ಸಚಿವ ಡಿ.ವಿ. ಸದಾನಂದಗೌಡ ಭರವಸೆ ಇತ್ತಿದ್ದಾರೆ. 

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ದೆಹಲಿಯಿಂದ ಶನಿವಾರ ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿದ ಪ್ರಹ್ಲಾದ್ ಜೋಶಿ, ರಾಜ್ಯದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧವಿದ್ದೇವೆ. ತಾವೂ ಸೇರಿ ನಿರ್ಮಲಾ ಸೀತಾ ರಾಮನ್, ಡಿ.ವಿ. ಸದಾನಂದಗೌಡ ಮತ್ತು ಸುರೇಶ್ ಅಂಗಡಿ ರಾಜ್ಯದ ಹಿತ ಕಾಪಾಡಲು ಕಾರ್ಯ ನಿರ್ವಹಿಸುತ್ತೇವೆ. ರಾಜ್ಯದ ಸಮಸ್ಯೆ, ಅಗತ್ಯಗಳ ಬಗ್ಗೆ ಚರ್ಚಿಸಲು ನಾಲ್ವರಲ್ಲಿ ಯಾರದ್ದಾದರೂ ಒಬ್ಬರ ಮನೆಯಲ್ಲಿ ಪ್ರತಿ 15 ದಿನಕ್ಕೊಮ್ಮೆ ಸಭೆ ಸೇರುತ್ತೇವೆ ಎಂದರು. 

ಇದೇ ವೇಳೆ, ನಗರದಲ್ಲಿ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಸದಾನಂದಗೌಡ, ಈಗ ಅನಂತ ಕುಮಾರ್ ನಮ್ಮ ಜತೆ ಇಲ್ಲ. ರಾಜ್ಯದ ಪ್ರತಿನಿಧಿಯಾಗಿ ನಾಲ್ವರಿಗೆ ಸಚಿವ ಸ್ಥಾನ ಲಭ್ಯವಾ ಗಿದ್ದು, ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯದ ಅಭಿವೃದ್ಧಿಗಾಗಿ ನಾಲ್ವರು ಸಚಿವರು ಒಟ್ಟಾಗಿ ಹೋಗುತ್ತೇವೆ. ಈಗಾಗಲೇ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಮಾತನಾಡಿದ್ದು, ಪ್ರತಿ 15 ದಿನಕ್ಕೊಮ್ಮೆ ಸಭೆ ಸೇರಿ ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸುತ್ತೇವೆ ಎಂದು ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು