ಜಾಗತಿಕ ಉಗ್ರರ ಪಟ್ಟಿಗೆ ಅಜರ್‌?

Published : May 01, 2019, 08:35 AM IST
ಜಾಗತಿಕ ಉಗ್ರರ ಪಟ್ಟಿಗೆ ಅಜರ್‌?

ಸಾರಾಂಶ

ಜಾಗತಿಕ ಉಗ್ರರ ಪಟ್ಟಿಗೆ ಇಂದು ಅಜರ್‌? | ವಿಶ್ವಸಂಸ್ಥೆಯ ದಿಗ್ಬಂಧನ ಸಮಿತಿ ಸಭೆ | ಚೀನಾದಿಂದ ತಡೆ ತೆರವು ಸಾಧ್ಯತೆ

ನವದೆಹಲಿ (ಮೇ. 01): ಪುಲ್ವಾಮಾ ಸೇರಿದಂತೆ ದೇಶದಲ್ಲಿ ಹಲವು ಭಯೋತ್ಪಾದಕ ದಾಳಿಗಳಿಗೆ ಕಾರಣನಾಗಿರುವ ಜೈಷ್‌ ಎ ಮೊಹಮ್ಮದ್‌ ಉಗ್ರಗಾಮಿ ಸಂಘಟನೆಯ ಸಂಸ್ಥಾಪಕ ಮೌಲಾನಾ ಮಸೂದ್‌ ಅಜರ್‌ನನ್ನು ವಿಶ್ವಸಂಸ್ಥೆಯು ಬುಧವಾರ ಜಾಗತಿಕ ಉಗ್ರಗಾಮಿಗಳ ಪಟ್ಟಿಗೆ ಸೇರ್ಪಡೆ ಮಾಡುವ ಸಾಧ್ಯತೆಗಳು ಕಂಡುಬರುತ್ತಿವೆ.

ವಿಶ್ವಸಂಸ್ಥೆಯ ದಿಗ್ಬಂಧನ ಸಮಿತಿಯ ಸಭೆ ಬುಧವಾರ ನಡೆಯಲಿದೆ. ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ಭಾರತದ ಪ್ರಯತ್ನಗಳಿಗೆ ಈವರೆಗೆ 4 ಬಾರಿ ತಡೆಯೊಡ್ಡಿರುವ ಚೀನಾ, ಈ ಬಾರಿ ತನ್ನ ನಿಲುವು ಬದಲಿಸಿಕೊಳ್ಳುವುದು ಪಕ್ಕಾ ಆಗಿದೆ. ಹೀಗಾಗಿ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ಬುಧವಾರ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಈ ಬೆಳವಣಿಗೆಗಳನ್ನು ಹತ್ತಿರದಿಂದ ಬಲ್ಲ ವ್ಯಕ್ತಿಗಳು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಒಂದು ವೇಳೆ, ಅಜರ್‌ ಜಾಗತಿಕ ಉಗ್ರರ ಪಟ್ಟಿಗೆ ಸೇರ್ಪಡೆಯಾಗಿದ್ದೇ ಆದಲ್ಲಿ ಅದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಿಕ್ಕ ದೊಡ್ಡ ರಾಜತಾಂತ್ರಿಕ ಜಯವಾಗಲಿದೆ. ಅಜರ್‌ನ ಆರ್ಥಿಕ ವ್ಯವಹಾರ, ಓಡಾಟಗಳಿಗೂ ಈ ನಿರ್ಧಾರದಿಂದ ಹೊಡೆತ ಬೀಳಲಿದೆ ಎಂದು ಹೇಳಲಾಗುತ್ತಿದೆ.

ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸಬೇಕು ಎಂದು ಭಾರತ ಒತ್ತಾಯಿಸುತ್ತಲೇ ಬಂದಿತ್ತು. ಅದಕ್ಕೆ ಪಾಕಿಸ್ತಾನದ ಆಪ್ತ ಮಿತ್ರ ಚೀನಾ ವಿಶ್ವಸಂಸ್ಥೆಯಲ್ಲಿ ತನಗಿರುವ ಅಧಿಕಾರ ಬಳಸಿ ತಡೆಯೊಡ್ಡುತ್ತಲೇ ಬಂದಿತ್ತು. 40 ಸಿಆರ್‌ಪಿಎಫ್‌ ಯೋಧರನ್ನು ಬಲಿ ಪಡೆದ ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಬೇಕು ಎಂಬ ನಿರ್ಣಯವನ್ನು ವಿಶ್ವಸಂಸ್ಥೆಯಲ್ಲಿ ಅಮೆರಿಕ ಹಾಗೂ ಬ್ರಿಟನ್‌ ಬೆಂಬಲದೊಂದಿಗೆ ಫ್ರಾನ್ಸ್‌ ಮಂಡಿಸಿತ್ತು. ಇದಕ್ಕೂ ಚೀನಾ ತಡೆಯೊಡ್ಡಿತ್ತು. ಆದರೆ ಅಮೆರಿಕ ಮತ್ತಿತರ ದೇಶಗಳ ಒತ್ತಡಕ್ಕೆ ಮಣಿದು ಈಗ ತಡೆ ತೆರವುಗೊಳಿಸುವ ನಿಲುವಿಗೆ ಬಂದಿದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ