ಮುಂದುವರಿದ ಧ್ವಂಸ ರಾಜಕಾರಣ: ಉತ್ತರ ಪ್ರದೇಶದಲ್ಲಿ ಬಾಬಾಸಾಹೇಬ್ ಪ್ರತಿಮೆ ವಿರೂಪ

Published : Mar 10, 2018, 05:36 PM ISTUpdated : Apr 11, 2018, 01:11 PM IST
ಮುಂದುವರಿದ ಧ್ವಂಸ ರಾಜಕಾರಣ: ಉತ್ತರ ಪ್ರದೇಶದಲ್ಲಿ ಬಾಬಾಸಾಹೇಬ್ ಪ್ರತಿಮೆ ವಿರೂಪ

ಸಾರಾಂಶ

ಬುಧವಾರ ಮೀರಠ್’ನಲ್ಲೂ ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸಿದ ಘಟನೆ ಶುಕ್ರವಾರ ಉತ್ತರಾಖಂಡದ ಹರಿದ್ವಾರದಲ್ಲೂ ಅಂಬೇಡ್ಕರ್ ಪ್ರತಿಮೆಗೆ ಹಾನಿ

ಆಜಂಗಢ, ಉತ್ತರಪ್ರದೇಶ: ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ  ಕಮ್ಯೂನಿಸ್ಟ್ ನಾಯಕ ಲೆನಿನ್ ಪ್ರತಿಮೆ ಕೆಳಗುರುಳಿಸಿದ ಬೆನ್ನಲ್ಲಿ ಆರಂಭವಾದ ಪ್ರತಿಮೆ ರಾಜಕೀಯ ಇದೀಗ ಉತ್ತರ ಪ್ರದೇಶದಲ್ಲಿ ಮರುಕಳಿಸಿದೆ.

ಉತ್ತರ ಪ್ರದೇಶದ  ಆಜಂಗಢದಲ್ಲಿ ದುಷ್ಕರ್ಮಿಗಳು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆಂದು ಏಎನ್’ಐ ವರದಿ ಮಾಡಿದೆ.

ಕಳೆದ ಬುಧವಾರ ಮೀರಠ್’ನಲ್ಲೂ ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸಿದ ಘಟನೆ ನಡೆದಿತ್ತು.  ಶುಕ್ರವಾರ ಉತ್ತರಾಖಂಡದ ಹರಿದ್ವಾರದಲ್ಲೂ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು.

ಕಳೆದ ತ್ರಿಪುರಾ ವಿದಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ, ಲೆನಿನ್ ಪ್ರತಿಮೆಯನ್ನು ಉರುಳಿಸಲಾಗಿತ್ತು.

ಲೆನಿನ್‌ ಪ್ರತಿಮೆ ಬಳಿಕ ಮುಂದಿನ ಸರದಿ ಪೆರಿಯಾರ್‌ ಅವರದ್ದು ಎಂಬ ಬಿಜೆಪಿ ನಾಯಕ ಎಚ್‌.ರಾಜಾ ಅವರ ಹೇಳಿಕೆ ಬೆನ್ನಲ್ಲೇ, ಮಂಗಳವಾರ ತಮಿಳುನಾಡಿನ ವೆಲ್ಲೂರಿನಲ್ಲಿ ದ್ರಾವಿಡ ಹೋರಾಟಗಾರ ಪೆರಿಯಾರ್‌ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು.

(ಚಿತ್ರ: ಎಎನ್’ಐ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ
ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು