
ಲಕ್ನೋ[ಜೂ.9]: ಬಾಲಿವುಡ್ ನಟ ಸಂಜಯ್ ದತ್ ಇಂದು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಲಕ್ನೋದಲ್ಲಿ ನಡೆದ ಬಿಜೆಪಿಯ ‘ಸಂಪರ್ಕ್ ಫಾರ್ ಸಮರ್ಥನ್’ ಕಾರ್ಯಕ್ರಮದಲ್ಲಿ ಸಂಜಯ್ ದತ್ ಭಾಗವಹಿಸಿದ್ದರು.
ಯೋಗಿ ಆದಿತ್ಯನಾಥ್ ಅಧಿಕೃತ ನಿವಾಸಕ್ಕೆ ತೆರಳಿದ ಸಂಜಯ್ ದತ್, ಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಮೋದಿ ಸರ್ಕಾರದ ನಾಲ್ಕು ವರ್ಷದ ಸಾಧನೆಯನ್ನು ಬಿಂಬಿಸುವ ಕಿರು ಹೊತ್ತಿಗೆಯನ್ನು ಸಿಎಂ ಸಂಜಯ್ ದತ್ ಅವರಿಗೆ ನೀಡಿದರು.
ಕೇಂದ್ರದ ಮೋದಿ ಸರ್ಕಾರ ನಾಲ್ಕು ವರ್ಷ ಸಂಪೂರ್ಣಗೊಳಿಸಿದ ಹಿನ್ನೆಲೆಯಲಿ ಬಿಜೆಪಿ ರಾಷ್ತಾಧ್ಯಕ್ಷ ಅಮಿತ್ ಶಾ ಮೇ 29 ರಂದು ‘ಸಂಪರ್ಕ್ ಫಾರ್ ಸಮರ್ಥನ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಈಗಾಗಲೇ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಉದ್ಯಮಿ ರತನ್ ಟಾಟಾ, ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಮತ್ತು ಕ್ರೀಡಾಪಟು ಮಿಲ್ಕಾ ಸಿಂಗ್ ಸೇರಿದಂತೆ ಹಲವು ನಾಯಕರನ್ನು ಅಮಿತ್ ಶಾ ಭೇಟಿ ಮಾಡಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ನಿನ್ನೆ ಚಿತ್ರಲೇಖಕ ಸಲೀಂ ಖಾನ್ ಮತ್ತು ನಟ ಸಲ್ಮಾನ್ ಖಾನ್ ಅವರನ್ನು ಭೇಟಿಯಾಗಿ ಅಭಿಯಾನಕ್ಕೆ ಬೆಂಬಲ ಕೋರಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.