
ನವದೆಹಲಿ (ಏ.11): ನವರಾತ್ರಿ ಸಂದರ್ಭದಲ್ಲಿ 24 ಗಂಟೆ ಯಾವುದೇ ಅಡ್ಡಿಯಿಲ್ಲದೇ ವಿದ್ಯುತ್ ಪೂರೈಕೆ ಮಾಡಿ ಯಶಸ್ವಿಯಾದ ಬಳಿಕ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿಲ್ಲೆಗಳಲ್ಲಿ 24 ತಾಸು, ಹಳ್ಳಿಗಳಲ್ಲಿ 18 ತಾಸು, ತಾಲೂಕು ಪ್ರದೇಶ ಹಾಗೂ ಬುಂದೇಲ್ ಖಂಡ ಭಾಗಗಳಲ್ಲಿ 20 ತಾಸು ವಿದ್ಯುತ್ ನೀಡಬೇಕೆಂದು ಇಂದು ಆದೇಶಿಸಿದ್ದಾರೆ.
ಗ್ರಾಮೀಣ ಭಾಗಗಳಲ್ಲಿ ಟ್ರಾನ್ಸ್ ಫಾರ್ಮಾರ್ ಸುಟ್ಟು ಹೋಗಿದ್ದರೆ ಕೂಡಲೇ ಸರಿಪಡಿಸಿ. ಇದರಿಂದಾಗಿ ಕೃಷಿ ಚಟುವಟಿಕೆಗಳಿಕೆ ಅಡ್ಡಿಯಾಗಬಾರದು. ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗಲು ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ನಿರಂತರವಾಗಿ ವಿದ್ಯುತ್ ನೀಡಿ ಎಂದು ಆದಿತ್ಯನಾಥ್ ಇಂಧನ ಇಲಾಖೆಗೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.