ಕೊನೆಗೂ ಬಂಗಾಳ ನೆಲ ಮುಟ್ಟಿದ ಯೋಗಿ: ಭರ್ಜರಿ ಭಾಷಣ!

Published : Feb 05, 2019, 05:25 PM IST
ಕೊನೆಗೂ ಬಂಗಾಳ ನೆಲ ಮುಟ್ಟಿದ ಯೋಗಿ: ಭರ್ಜರಿ ಭಾಷಣ!

ಸಾರಾಂಶ

ಮಮತಾ ಬ್ಯಾನರ್ಜಿಗೆ ಚಕ್ಮಾ ಕೊಟ್ಟ ಉತ್ತರ ಪ್ರದೇಶ ಮುಖ್ಯಮಂತ್ರಿ| ಕೊನೆಗೂ ಬಂಗಾಳ ತಲುಪಿದ ಯೋಗಿ ಆದಿತ್ಯನಾಥ್| ಜಾರ್ಖಂಡ್ ವರೆಗೂ ಹೆಲಿಕಾಪ್ಟರ್ ನಲ್ಲಿ ಪ್ರಯಾಣ| ಜಾರ್ಖಂಡ್ ನಿಂದ ರಸ್ತೆ ಮಾರ್ಗವಾಗಿ ಪ.ಬಂಗಾಳದ ಪುರುಲಿಯಾಗೆ ಪ್ರಯಾಣ| ಪುರುಲಿಯಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಯೋಗಿ ಭಾಷಣ| ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಹರಿಹಾಯ್ದ ಯುಪಿ ಸಿಎಂ

ಪುರುಲಿಯಾ(ಫೆ.05): ಇದನ್ನು ಪ್ರಜಾಪ್ರಭುತ್ವದ ಗೆಲುವಂತಿರೋ?, ಇಲ್ಲಾ ಬಿಜೆಪಿ ಗೆಲುವಂತಿರೋ ನಿಮಗೆ ಬಿಟ್ಟಿದ್ದು. ಆದರೆ ಸತತ ಅನುಮತಿ ನಿರಾಕರಣೆ ನಡುವೆಯೂ ಬಂಗಾಳದ ನೆಲ ಮುಟ್ಟುವಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಯಶಸ್ವಿಯಾಗಿದ್ದಾರೆ.

ಹೌದು, ಬಿಜೆಪಿ ರಾಷ್ಟ್ರೀಯ ನಾಯಕ ಅಮಿತ್ ಶಾ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಇಳಿಯಲು ಪ.ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಸತತವಾಗಿ ಅನುಮತಿ ನಿರಾಕರಿಸುತ್ತಲೇ ಇತ್ತು.

ಇಂದೂ ಕೂಡ ಸಿಎಂ ಯೋಗಿ ಹೆಲಿಕಾಪ್ಟರ್ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು. ಆದರೆ ಇದಕ್ಕೆ ಬೆದರದ ಯೋಗಿ ಆದಿತ್ಯನಾಥ್, ಜಾರ್ಖಂಡ್ ವರೆಗೆ ಹೆಲಿಕಾಪ್ಟರ್ ನಲ್ಲಿ ಬಂದು, ಅಲ್ಲಿಂದ ರಸ್ತೆ ಮಾರ್ಗವಾಗಿ ಪ.ಬಂಗಾಳ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.

ಪ.ಬಂಗಾಳದ ಪುರುಲಿಯಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಿದ ಯೋಗಿ, ಮಮತಾ ಬ್ಯಾನರ್ಜಿ ಸರ್ಕಾರ ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುವಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇರಳ ಸಾಹಿತ್ಯ ಉತ್ಸವದಲ್ಲಿ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಭಾಗಿ
Happy New Year 2026 Wishes: ಪ್ರೀತಿಪಾತ್ರರಿಗೆ ಅಡ್ವಾನ್ಸ್ ಹ್ಯಾಪಿ ನ್ಯೂ ಇಯರ್ ವಿಷಸ್ ಕಳುಹಿಸ್ಬೇಕಾ?, ಇಲ್ಲಿವೆ ಬಗೆ ಬಗೆಯ ಚೆಂದದ ಸಂದೇಶ