
ಮಂಗಳೂರು(ಅ.05): ಕೇರಳದಲ್ಲಿ ನಡೆಯುತ್ತಿರುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಯು.ಪಿ ಸಿಎಂ ಯೋಗಿ ಆದಿತ್ಯನಾಥ್ ನಿನ್ನೆ ಮಂಗಳೂರಿನ ಕದ್ರಿ ಜೋಗಿ ಮಠಕ್ಕೆ ಭೇಟಿ ನೀಡಿದ್ರು. ನಿನ್ನೆ ರಾತ್ರಿ 10.30ರ ಸುಮಾರಿಗೆ ಆಗಮಿಸಿದ ಯೋಗಿ ಆದಿತ್ಯನಾಥ್ ರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ನಾಥ ಪಂಥದ ದಕ್ಷಿಣ ಭಾರತದ ಪ್ರಮುಖ ಕೇಂದ್ರ ಕದ್ರಿ ಜೋಗಿ ಮಠದ ಕದಳಿ ಕಾಳ ಬೈರವ ದರ್ಶನ ಪಡೆದ ಯೋಗಿ, ಸ್ವತಃ ತಾವೇ ದೇವರಿಗೆ ಆರತಿ ಎತ್ತಿ ಪೂಜೆ ಸಲ್ಲಿಸಿದ್ದರು. ಮಠದ ಆವರಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ರು. ಸನಾತನ ಹಿಂದೂ ಧರ್ಮ ಉಳಿದರೆ ಎಲ್ಲವೂ ಉಳಿಯುತ್ತೆ. ಆದ್ರೆ ಇಂದು ಅದೇ ಕೇರಳದಲ್ಲಿ ಸನಾತನ ಹಿಂದೂ ಧರ್ಮದ ಮೇಲೆ ದಾಳಿ ನಡೆಯುತ್ತಿದೆ ಎಂದರು.
ಯು.ಪಿ ಸಿಎಂ ಯೋಗಿ ಆದಿತ್ಯನಾಥ ಹಾಗೂ ಮಂಗಳೂರಿನ ಕದ್ರಿ ಜೋಗಿ ಮಠಕ್ಕೆ ಹಲವಾರು ವರ್ಷಗಳ ಸಂಬಂಧವಿದೆ. ಕದ್ರಿ ಜೋಗಿ ಮಠ ನಾಥ ಪಂಥದ ದಕ್ಷಿಣ ಭಾರತದ ಪ್ರಮುಖ ಕೇಂದ್ರವಾಗಿದೆ. ಕದ್ರಿಯಲ್ಲಿರುವ ಯೋಗೇಶ್ವರ ಅಥವಾ ಜೋಗಿ ಮಠವು ನಾಥ ಸಂಪ್ರದಾಯದ ಮಠ. ಇಲ್ಲಿರೋ ಏಕೈಕ ರಾಜ ಯೋಗಿ ಅವರನ್ನು ಆಯ್ಕೆ ಮಾಡುವುದು ಇದೇ ಯೋಗಿ ಆದಿತ್ಯನಾಥ್ . ಈಗಾಗಲೇ ಈ ಮಠದ ಇಬ್ಬರು ರಾಜಯೋಗಿಗಳನ್ನು ಆದಿತ್ಯನಾಥರೇ ಆಯ್ಕೆ ಮಾಡಿದ್ದರು ಎಂಬುವುದು ವಿಶೇಷ.
ನಿನ್ನೆ ರಾತ್ರಿ ಮಂಗಳೂರಿನ ಜೋಗಿ ಮಠದಲ್ಲೇ ಉಳಿದುಕೊಂಡಿದ್ದ ಯೋಗಿ ಆದಿತ್ಯನಾಥ್, ಇಂದು ಮುಂಜಾನೆ ವಿಶೇಷ ವಿಮಾನದ ಮೂಲಕ ಉತ್ತರಪ್ರದೇಶಕ್ಕೆ ವಾಪಸ್ಸಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.