ಮೃತಪಟ್ಟ ಪೊಲೀಸ್ ಅಧಿಕಾರಿಗೂ ಟ್ರಾನ್ಸ್‌ಫರ್ ಭಾಗ್ಯ!

Published : Jan 12, 2019, 04:22 PM IST
ಮೃತಪಟ್ಟ ಪೊಲೀಸ್ ಅಧಿಕಾರಿಗೂ ಟ್ರಾನ್ಸ್‌ಫರ್ ಭಾಗ್ಯ!

ಸಾರಾಂಶ

ಪೊಲೀಸ್ ಇಲಾಖೆ ಹೊರಡಿಸಿರುವ ವರ್ಗಾವಣೆ ಪಟ್ಟಿಯಲ್ಲಿ, ತಿಂಗಳ ಹಿಂದೆ ಮೃತಪಟ್ಟಿರುವ ಪೊಲೀಸ್ ಅಧಿಕಾರಿಯ ಹೆಸರು ನಮೂದಿಸಿದ್ದು ಸದ್ಯ ಸದ್ದು ಮಾಡುತ್ತಿದೆ. ಅಷ್ಟಕ್ಕೂ ಆ ಪೊಲೀಸ್ ಅಧಿಕಾರಿ ಯಾರು? ಇಂತಹ ಎಡವಟ್ಟು ಮಾಡಿದ ಪೊಲೀಸ್ ಇಲಾಖೆ ಯಾವುದು? ಇಲ್ಲಿದೆ ವಿವರ

ಲಕ್ನೋ[ಜ.12]: ವಿವಿಧ ಪ್ರಕರಣಗಳಲ್ಲಿ ಸಂಭವಿಸಿದ ಅಜಾರುಕತೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಸುದ್ದಿಯಾಗುತ್ತದೆ. ಇದೀಗ ಮತ್ತೊಮ್ಮೆ ಯುಪಿ ಪೊಲೀಸರು ವರ್ಗಾವಣೆ ವಿಚಾರದಲ್ಲಿ ಮಾಡಿದ ಎಡವಟ್ಟಿನಿಂದ ಸುದ್ದಿಯಾಗಿದ್ದಾರೆ. ವರ್ಗಾವಣೆ ಪಟ್ಟಿಯಲ್ಲಿ ತಿಂಗಳ ಹಿಂದೆ ಸಾವನ್ನಪ್ಪಿರುವ ಡಿವೈಎಸ್‌ಪಿ ಸತ್ಯ ನರೇನ್ ಸಿಂಗ್ ಹೆಸರನ್ನೂ ಸೇರಿಸಿ ವಿವಾದ ಸೃಷ್ಟಿಸಿದೆ. ಸದ್ಯ ಈ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಡಿಜಿಪಿ ಒಪಿ ಸಿಂಗ್ ಕ್ಷಮೆಯಾಚಿಸಿದ್ದು, ಇಂತಹ ಎಡವಟ್ಟು ಮಾಡಿದ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ನೀಡುವುದಾಗಿ ತಿಳಿಸಿದ್ದಾರೆ.

ಇನ್ನು ಕಳೆದ ಕೆಲ ಸಮಯದಿಂದ ಉತ್ತರ ಪ್ರದೇಶ ಪೊಲೀಸ್ ಇಲಾಖೆಯು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಾದದಲ್ಲಿದೆ. ಕೆಲ ತಿಂಗಳಿನ ಹಿಂದಷ್ಟೇ ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಪೊಲೀಸ್ ಅಧಿಕಾರಿಯೊಬ್ಬರು ಲಕ್ನೋದಲ್ಲಿ ಆ್ಯಪಲ್ ಕಂಪೆನಿಯ ಮ್ಯಾನೇಜರ್ ಒಬ್ಬರನ್ನು ಗುಂಡಿಟ್ಟು ಕೊಂದಿದ್ದರು. ವಿವೇಕ್ ತಿವಾರಿ ಹತ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಾ ಇದು ಎನ್ ಕೌಂಟರ್ ಅಲ್ಲ, ಪ್ರಕರಣದ ತನಿಖೆ ನಡೆಸುತ್ತೇವೆ. ಅಗತ್ಯ ಬಿದ್ದರೆ ಸಿಬಿಐ ತನಿಖೆಗೂ ಆದೇಶಿಸುತ್ತೇವೆ ಎಂಬ ಸ್ಪಷ್ಟನೆ ನೀಡಿದ್ದರು. 

ಹೀಗಿದ್ದರೂ ವಿವೇಕ್ ತಿವಾರಿಯವರ ಪತ್ನಿ ಕಲ್ಪನಾರವರು ಸಿಎಂ ಯೋಗಿಯವರಿಗೆ ಪತ್ರ ಬರೆದು ಈ ಪ್ರಕರಣವನ್ನು ಸಿಬಿಐಗೆ ನೀಡಬೇಕೆಂದು ಒತ್ತಾಯಿಸಿದ್ದರು. ಅಲ್ಲದೇ ಪರಿಹಾರವಾಗಿ 1 ಕೋಟಿ ರೂಪಾಯಿ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಸ ನೀಡಬೇಕೆಂದು ಮನವಿ ಮಾಡಿದ್ದರು. ತನ್ನ ಗಂಡನನ್ನು ಗುಂಡು ಹಾರಿಸಿ ಕೊಂದ ಬಳಿಕ ಲಕ್ನೋ ಪೊಲೀಸರು ಅವರನ್ನು ಚರಿತ್ರಹೀನರೆಂದು ಸಾಬೀತುಪಡಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿದ್ದರು. ಇದೇ ವೇಳೆ ಗಾಡಿ ನಿಲ್ಲಿಸದಿದ್ದರೆ ಫೈರಿಂಗ್ ಮಾಡುವ ಅಧಿಕಾರ ಪೊಲೀಸರಿಗೆ ನೀಡಿದ್ದು ಯಾರು? ಎಂದೂ ಪ್ರಶ್ನಿಸಿದ್ದರು. ಈ ಮೂಲಕ ಯೋಗಿ ಸರ್ಕಾರದ ಬಳಿ ನ್ಯಾಯ ಕೊಡಿಸುವಂತೆ ಕೇಳಿಕೊಂಡಿದ್ದರು.

ಈ ಪ್ರಕರಣದ ಬೆನ್ನಲ್ಲೇ ವರ್ಗಾವಣೆ ಪಟ್ಟಿಯಲ್ಲಿ, ತಿಂಗಳ ಹಿಂದೆ ಸಾವನ್ನಪ್ಪಿರುವ ಡಿವೈಎಸ್ಪಿ ಸತ್ಯ ನರೇನ್ ಸಿಂಗ್ ಹೆಸರು ನಮೂದಿಸಿದ್ದಾರೆ. ಈ ವಿಚಾರ ಉತ್ತರ ಪ್ರದೇಶ ಪೊಲೀಸ್ ಇಲಾಖೆಯನ್ನು ತಲೆ ತಗ್ಗಿಸುವಂತೆ ಮಾಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?
ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ