ಕೋಮು ಗಲಭೆ: ಸಿಎಂ ಯೋಗಿ ವಿರುದ್ಧ ವಿಚಾರಣೆಗೆ ಅನುಮತಿ ನಿರಾಕರಿಸಿದ ಸರ್ಕಾರ

Published : May 12, 2017, 01:59 AM ISTUpdated : Apr 11, 2018, 12:59 PM IST
ಕೋಮು ಗಲಭೆ: ಸಿಎಂ ಯೋಗಿ ವಿರುದ್ಧ ವಿಚಾರಣೆಗೆ ಅನುಮತಿ ನಿರಾಕರಿಸಿದ ಸರ್ಕಾರ

ಸಾರಾಂಶ

ಗೋರಖ್‌'ಪುರದಲ್ಲಿ ನಡೆದ ಹಿಂದು- ಮುಸ್ಲಿಂ ಸಂಘರ್ಷ ವೇಳೆ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ.

ನವದೆಹಲಿ: 2007ರ ಗೋರಖ್‌ಪುರ ಗಲಭೆ ಪ್ರಕರಣ ಸಂಬಂಧ ಸಿಎಂ ಆದಿತ್ಯನಾಥ್‌ ವಿರುದ್ಧ ವಿಚಾರಣೆಗೆ ಮುಂದಾಗಿದ್ದ ಅಲಹಾಬಾದ್‌ ಹೈಕೋರ್ಟ್‌ಗೆ ಉತ್ತರಪ್ರದೇಶದ ಬಿಜೆಪಿ ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ.

ಗೋರಖ್‌'ಪುರದಲ್ಲಿ ನಡೆದ ಹಿಂದು- ಮುಸ್ಲಿಂ ಸಂಘರ್ಷ ವೇಳೆ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ. ಈ ವೇಳೆ ಜಿಲ್ಲಾಧಿಕಾರಿಯ ಆದೇಶದ ಹೊರತಾಗಿಯೂ ಅಂದಿನ ಸಂಸದ ಯೋಗಿ ಜನರನ್ನು ಉದ್ದೇಶಿಸಿ ಮಾತನಾಡಿದ್ದರು.

ಬಳಿಕ ಸ್ಥಳದಲ್ಲಿ ಭಾರೀ ಪ್ರಮಾಣದ ಹಿಂಸಾಚಾರ ನಡೆದಿತ್ತು. ಈ ಹಿನ್ನೆಲೆ ಯಲ್ಲಿ ಯೋಗಿ ಅವರನ್ನು ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಿ ದೂರು ನೀಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌