
ಮಹಾರಾಜ್ಗಂಜ್: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಹಾಡಲು ಮಕ್ಕಳಿಗೆ ಅವಕಾಶ ನೀಡದ ಮದ್ರಸಾವೊಂದರ ಮಾನ್ಯತೆಯನ್ನು ರದ್ದುಪಡಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಕೊಲ್ಹುಯಿಯ ಬಡಾಗೊ ಪ್ರದೇಶದಲ್ಲಿನ ಮದ್ರಸಾ ಅರೇಬಿಯಾ ಅಹ್ಲೆ ಬಾಲಕಿಯರ ಕಾಲೇಜಿನ ಮಾನ್ಯತೆ ರದ್ದಾಗಿದೆ.
ಆರೋಪಗಳ ತನಿಖೆಗಾಗಿ ರಚಿಸಲಾಗಿದ್ದ ಸಮಿತಿಯ ವರದಿಯ ಆಧಾರದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿ ಪ್ರಭಾತ್ ಕುಮಾರ್ ಹೇಳಿದ್ದಾರೆ. ಧ್ವಜಾರೋಹಣದ ಬಳಿಕ ಮದ್ರಸಾದ ಪ್ರಾಂಶುಪಾಲ ಮತ್ತು ಶಿಕ್ಷಕರು, ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುವುದನ್ನು ತಡೆದಿದ್ದರು. ಈ ಶಿಕ್ಷಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದು, ಅವರ ಬಂಧನವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.