ಇಂದು ರಾಷ್ಟ್ರಗೀತೆ ಹಾಡಲು ಕೆಲವು ಮದರಸಾಗಳಿಂದ ನಿರಾಕರಣೆ

Published : Aug 15, 2017, 05:51 PM ISTUpdated : Apr 11, 2018, 12:59 PM IST
ಇಂದು ರಾಷ್ಟ್ರಗೀತೆ ಹಾಡಲು ಕೆಲವು ಮದರಸಾಗಳಿಂದ ನಿರಾಕರಣೆ

ಸಾರಾಂಶ

ಇಲ್ಲಿನ ಕೆಲವು ಮದರಸಾಗಳು ರಾಷ್ಟ್ರಗೀತೆಯನ್ನು ಹಾಡಲು ನಿರಾಕರಿಸಿದ್ದು, ಯೋಗಿ ಸರ್ಕಾರದ ಆದೇಶವನ್ನು ಪಾಲನೆ ಮಾಡಿಲ್ಲದಿರುವುದು ಕಂಡು ಬಂದಿದೆ.

ಉತ್ತರ ಪ್ರದೇಶ (ಆ.15): ಇಲ್ಲಿನ ಕೆಲವು ಮದರಸಾಗಳು ರಾಷ್ಟ್ರಗೀತೆಯನ್ನು ಹಾಡಲು ನಿರಾಕರಿಸಿದ್ದು, ಯೋಗಿ ಸರ್ಕಾರದ ಆದೇಶವನ್ನು ಪಾಲನೆ ಮಾಡಿಲ್ಲದಿರುವುದು ಕಂಡು ಬಂದಿದೆ.

ರಾಜ್ಯದ ಎಲ್ಲಾ ಮದರಸಗಳಲ್ಲಿ ಸ್ವತಂತ್ರ ದಿನಾಚರಣೆಯನ್ನು ಆಚರಿಸಬೇಕು. ರಾಷ್ಟ್ರಗೀತೆಯನ್ನು ಹಾಡಬೇಕು. ಅದರ ವಿಡಿಯೋವನ್ನು ಕಳುಹಿಸಿಕೊಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಅನೇಕ ಮದರಸಗಳು ಪಾಲಿಸಿಲ್ಲ. ರಾಜ್ಯದ ದೊಡ್ಡ ಮದರಸಾ ಕೇಂದ್ರಗಳಾದ ಕಾನ್ಪುರ, ಮೀರತ್ ಮತ್ತು ಬರೇಲಿಯಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಬದಲಿಗೆ ‘ಸಾರೆ ಜಹಾಂಸೆ ಅಚ್ಚಾ’ ಹಾಡಿದ್ದು, ಆದರೆ ಇದನ್ನು ವಿಡಿಯೋ ಮಾಡಿಲ್ಲ. ನಮ್ಮ ದೇಶಭಕ್ತಿಗೆ ಪುರಾವೆಯನ್ನು ಕೊಡಲು ನಾವು ಬಯಸುವುದಿಲ್ಲ ಎಂದಿದ್ದಾರೆ.

ರಾಜ್ಯದ 16,000 ಮದರಸಾಗಳು ಸರ್ಕಾರದ ಆದೇಶವನ್ನು ಪಾಲಿಸಿಲ್ಲ. ಕೆಲವು ಪ್ರಮುಖ ಮುಸ್ಲೀಂ ಮುಖಂಡರು ಆದೇಶವನ್ನು ಸಾರ್ವಜನಿಕವಾಗಿಯೇ ಖಂಡಿಸಿದ್ದಾರೆ.

ಸಾಮಾನ್ಯವಾಗಿ ಸ್ವತಂತ್ರ ದಿನಾಚರಣೆ ದಿನದಂದು, ಗಣರಾಜ್ಯ ದಿನದಂದು ನಾವು ರಾಷ್ಟ್ರಗೀತೆಯನ್ನು ಹಾಡುವುದಿಲ್ಲ. ಆದರೆ ಈ ಸಂದರ್ಭದಲ್ಲಿ ಮಾತ್ರ ಸರ್ಕಾರದ ಆದೇಶವನ್ನು ಪಾಲಿಸಿದ್ದೇವೆ ಎಂದು ಹೆಸರು ಹೇಳಲಿಚ್ಚಿಸದ ಮೌಲ್ವಿಯಿಬ್ಬರು ಹೇಳಿದ್ದಾರೆ.  

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು: ಎರಡೂ ಬಣಗಳಿಂದ ಘೋಷಣೆಗಳ ಸಮರ
ಪವಿತ್ರ ಶಕ್ತಿ ಮೇಲೆ ಬಿಜೆಪಿ, ಆರೆಸ್ಸೆಸ್‌ ದಾಳಿ: ಸಿಎಂ ಸಿದ್ದರಾಮಯ್ಯ ಕಿಡಿ