ಯೋಗಿ ಸರ್ಕಾರಕ್ಕೆ ಮುಜುಗರ ತಂದ ಸಚಿವ: ಜಿಎಸ್ಟಿ ಪೂರ್ಣರೂಪನೇ ಗೊತ್ತಿಲ್ಲ!

Published : Jun 30, 2017, 01:10 PM ISTUpdated : Apr 11, 2018, 01:03 PM IST
ಯೋಗಿ ಸರ್ಕಾರಕ್ಕೆ ಮುಜುಗರ ತಂದ ಸಚಿವ: ಜಿಎಸ್ಟಿ ಪೂರ್ಣರೂಪನೇ ಗೊತ್ತಿಲ್ಲ!

ಸಾರಾಂಶ

ಇಡೀ ದೇಶವೇ ಹೊಸ ತೆರಿಗೆ ವ್ಯವಸ್ಥೆ ಜಿಎಸ್ಟಿಯನ್ನು ಅಳವಡಿಸಿಕೊಳ್ಳಲು ಸಜ್ಜಾಗುತ್ತಿದೆ, ಆದರೆ ಉತ್ತರ ಪ್ರದೇಶದ ಸಚಿವರೇ ಜಿಎಸ್ಟಿಯ ಪೂರ್ಣರೂಪ ಗೊತ್ತಿಲ್ಲದೇ ಯೋಗಿ ಸರ್ಕಾರಕ್ಕೆ ಮುಜುಗರ ಉಂಟುಮಾಡಿದ ಘಟನೆ ನಡೆದಿದೆ.

ಮಹಾರಾಜಗಂಜ್, ಉತ್ತರ ಪ್ರದೇಶ: ಇಡೀ ದೇಶವೇ ಹೊಸ ತೆರಿಗೆ ವ್ಯವಸ್ಥೆ ಜಿಎಸ್ಟಿಯನ್ನು ಅಳವಡಿಸಿಕೊಳ್ಳಲು ಸಜ್ಜಾಗುತ್ತಿದೆ, ಆದರೆ ಉತ್ತರ ಪ್ರದೇಶದ ಸಚಿವರೇ ಜಿಎಸ್ಟಿಯ ಪೂರ್ಣರೂಪ ಗೊತ್ತಿಲ್ಲದೇ ಯೋಗಿ ಸರ್ಕಾರಕ್ಕೆ ಮುಜುಗರ ಉಂಟುಮಾಡಿದ ಘಟನೆ ನಡೆದಿದೆ.

ಜಿಎಸ್ಟಿ ಬಗ್ಗೆ ಪ್ರಚಾರ ಕೈಗೊಳ್ಳುತ್ತಿರುವ ಸಂದರ್ಭದಲ್ಲಿ ಮಾಧ್ಯಮದವರು ಸಮಾಜ ಕಲ್ಯಾಣ ಸಚಿವ ರಾಮಪತಿ ಶಾಸ್ತ್ರಿಯವರನ್ನು ಜಿಎಸ್ಟಿಯ ಪೂರ್ಣರೂಪವೇನೆಂದು ಕೇಳಿದ್ದಾರೆ. ಆದರೆ ಶಾಸ್ತ್ರಿಯವರು ಅದಕ್ಕೆ ಉತ್ತರಿಸಲಾಗದೇ ಪರದಾಡಿದ್ದಾರೆ.

ಕೊನೆಗೆ, ನನಗೆ ಪೂರ್ಣರೂಪ ಏನೆಂದು ತಿಳಿದಿದೆ, ನಾನು ಜಿಎಸ್’ಟಿ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸುತ್ತಿದ್ದೇನೆ ಎಂದು ಹೇಳಿ ಜಾರಿಕೊಂಡಿದ್ದಾರೆ.

ಇಂದು ಮಧ್ಯರಾತ್ರಿಯಿಂದ ದೇಶಾದ್ಯಂತ ಜಿಎಸ್ಟಿ ಜಾರಿಯಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!
ಕಂಟೋನ್ಮೆಂಟ್‌ ರೈಲು ನಿಲ್ದಾಣದ 371 ಮರ ಕಡಿಯಲು ಹೈಕೋರ್ಟ್‌ ತಡೆ, ತನ್ನ ಅನುಮತಿ ಇಲ್ಲದೆ ಏನೂ ಮಾಡುವಂತಿಲ್ಲವೆಂದು ಆರ್ಡರ್